ದಾವೋಸ್ ನಿಂದ ವಾಪಸಾದ ಬಳಿಕ ಸಂಪುಟ ವಿಸ್ತರಣೆ ಮಾಡುತ್ತೇವೆ-ಸಿಎಂ ಯಡಿಯೂರಪ್ಪ

ಭಾನುವಾರ, 19 ಜನವರಿ 2020 (10:32 IST)
ಬೆಂಗಳೂರು : ದಾವೋಸ್ ನಿಂದ ವಾಪಸಾದ ಬಳಿಕ ಸಂಪುಟ ವಿಸ್ತರಣೆ ಮಾಡುತ್ತೇನೆ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ.


ದಾವೋಸ್ ಗೆ ತೆರಳುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಪುಟ ವಿಸ್ತರಣೆ ಬಗ್ಗೆ ಅಮಿತ್ ಶಾ ಜೊತೆ ಚರ್ಚಿಸಿದ್ದೇನೆ. ಅಮಿತ್ ಶಾರಿಂದ ಉತ್ತಮ ಸ್ಪಂದನೆ ಸಿಕ್ಕಿದೆ. ದಾವೋಸ್ ನಿಂದ ವಾಪಸಾದ ಬಳಿಕ 1 ದಿನಗಳಲ್ಲಿ ಸಂಪುಟ ವಿಸ್ತರಣೆ ಮಾಡುತ್ತೇವೆ ಎಂದು ಹೇಳಿದ್ದಾರೆ.

 

ಅಲ್ಲದೇ ದಾವೋಸ್ ನಲ್ಲಿ 35 ಉದ್ಯಮಿಗಳ ಜತೆ ಸಂವಾದ ನಡೆಯಲಿದೆ. ರಾಜ್ಯಕ್ಕೆ ಬಂಡವಾಳ ಹರಿದು ಬರುವ ಸಾಧ್ಯತೆ ಇದೆ. ದಾವೋಸ್ ಶೃಂಗಸಭೆಯಿಂದ ರಾಜ್ಯದಲ್ಲಿ ಉದ್ಯೋಗ ಹೆಚ್ಚಳವಾಗುವ ನಿರೀಕ್ಷೆ ಇದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ