ಬಿಜೆಪಿಯವರ ವಿರುದ್ಧ ಕಿಡಿಕಾರಿದ ರೇವಣ್ಣ

ಶುಕ್ರವಾರ, 19 ಜುಲೈ 2019 (10:22 IST)
ಮೈಸೂರು : ಮೂರನೇ ಆಷಾಢ ಶುಕ್ರವಾರ ಹಿನ್ನೆಲೆಯಲ್ಲಿ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದ ಸಚಿವ ಹೆಚ್.ಡಿ ರೇವಣ್ಣ ಆ ವೇಳೆ ವಿಶ್ವಾಸದ ಮತಯಾಚನೆ ವಿಚಾರವಾಗಿ ಬಿಜೆಪಿಯವರ ವಿರುದ್ಧ ಕಿಡಿಕಾರಿದ್ದಾರೆ.



ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಇದೇ ಬಿಜೆಪಿಯ ಈ ಹಿಂದಿನ ಪ್ರಧಾನಿ ವಾಜಪೇಯಿ ಅವರು ವಿಶ್ವಾಸ ಮತ ತೋರಿಸಲು ಹತ್ತು ದಿನ ಸಮಯ ತೆಗೆದು ಕೊಂಡಿದ್ದರು. ಹೀಗಾಗಿ ಈ ಎಲ್ಲಾ ವಿಚಾರಗಳ ಬಗ್ಗೆ ಸುಪ್ರೀಂಕೋರ್ಟ್ ನಿರ್ದೇಶನದ ಮೇರೆಗೆ ಸ್ಪೀಕರ್ ಅವರು ಅಂತಿಮ ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದು ಹೇಳಿದ್ದಾರೆ

 

ವಿಶ್ವಾಸ ಮತಕ್ಕಾಗಿಯೇ ಮುಖ್ಯಮಂತ್ರಿ ಅವರು ಜುಲೈ 12ರಂದು ಕೇಳಿದರು. ಅಲ್ಲದೆ 12ರಂದು ಮೀಟಿಂಗ್ ಕೂಡ ಕರೆದಿದ್ದು, ಬಿಜೆಪಿಯವರು ಬಂದಿಲ್ಲ. ಜುಲೈ 18ರಂದು ಮತ್ತೆ ವಿಶ್ವಾಸಮತಕ್ಕೆ ಬಂದೆವು. ಆಗ ಸುಪ್ರೀಂಕೋರ್ಟ್ ಕೆಲವು ಡೈರೆಕ್ಷನ್ ನೀಡಿತ್ತು. ಇಲ್ಲಿ ಯಾರು ಕಾಲ ಹರಣ ಮಾಡುತ್ತಿದ್ದಾರೆ ಎಂದು ಜನ ನೋಡುತ್ತಿದ್ದಾರೆ. ಎಂದು ಅವರು ತಿಳಿಸಿದ್ದಾರೆ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ