ರೇವಣ್ಣ ಬಸವನಗುಡಿ ಮನೆಗೆ ಸಂತ್ರಸ್ತೆ ಕರೆತಂದು ಸ್ಥಳ ಮಹಜರು

Sampriya

ಸೋಮವಾರ, 6 ಮೇ 2024 (16:41 IST)
Photo Courtesy X
ಬೆಂಗಳೂರು: ಲೈಂಗಿಕ ಕಿರುಕುಳ ಮತ್ತು ಅತ್ಯಾಚಾರ ಪ್ರಕರಣದಲ್ಲಿ ದಾಖಲಾಗಿರುವ ದೂರಿನ ಅನ್ವಯ ಎಸ್‌ಐಟಿ ಅಧಿಕಾರಿಗಳು ಬಸವನಗುಡಿಯಲ್ಲಿರುವ ಎಚ್‌.ಡಿ.ರೇವಣ್ಣ ಅವರ ಮನೆಗೆ ಸಂತ್ರಸ್ತೆಯನ್ನು ಕರೆದೊಯ್ದು ಸ್ಥಳ ಮಹಜರು ನಡೆಸಿದರು.

ಪೊಲೀಸ್ ವಾಹನದಲ್ಲಿ ಸಂತ್ರಸ್ತೆಯನ್ನು ರೇವಣ್ಣ ಅವರ ಮನೆಗೆ ಕರೆದುಕೊಂಡು ಬಂದು ಒಂದು ಗಂಟೆಗೂ ಹೆಚ್ಚು ಕಾಲ ಸ್ಥಳ ಮಹಜರು ಮಾಡಿದರು. ಅಲ್ಲದೆ ಘಟನೆಯ ಮರುಸೃಷ್ಟಿ ಮಾಡಿ, ವಿಡಿಯೊ ಚಿತ್ರೀಕರಣ ಮಾಡಿಕೊಂಡರು. ಇದೆಲ್ಲ ಅಂಶವನ್ನು ಅಧಿಕಾರಿಗಳು, ದೋಷಾರೋಪ ಪಟ್ಟಿಯಲ್ಲಿ ನಮೂದಿಸಲಿದ್ದಾರೆ.

ಕೆ.ಆರ್.ನಗರ ಠಾಣೆಯಲ್ಲಿ ದಾಖಲಾಗಿರುವ ಅಪಹರಣ ಪ್ರಕರಣದಲ್ಲಿ ಜೆಡಿಎಸ್ ಶಾಸಕ ಎಚ್‌.ಡಿ.ರೇವಣ್ಣ ಅವರನ್ನು ಬಂಧಿಸಲಾಗಿದೆ. ಅವರನ್ನು ವಿಚಾರಣೆಗೆಗಾಗಿ ಮೇ 8ರವರೆಗೆ ಕಸ್ಟಡಿಗೆ ಪಡೆದಿದ್ದು, ಅರಮನೆ ರಸ್ತೆಯಲ್ಲಿರುವ ಸಿಐಡಿ ಕಟ್ಟಡದ ಸೆಲ್‌ನಲ್ಲಿ ಇರಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಸಂತ್ರಸ್ತೆಯ ಹೇಳಿಕೆ ದಾಖಲಿಸುತ್ತಿರುವ ಎಸ್‌ಐಟಿ ಅಧಿಕಾರಿಗಳು ಶೀಘ್ರದಲ್ಲೇ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಿದ್ದಾರೆ.
ಇಂದು ಆರೋಪಿ ಮನೆ ಮನೆ ಹಾಗೂ ತೋಟದ ಮನೆಗಳಿಗೆ ಕರೆದೊಯ್ದು ಮಹಜರು ನಡೆಸುತ್ತಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ