ಹೈಕೋರ್ಟ್ ನ ಏಕಸದಸ್ಯ ಪೀಠಕ್ಕೆ ಸಾರ್ವಜನಿಕರಿಂದ 60ಕ್ಕೂ ಹೆಚ್ಚು ರಿಟ್ ಅರ್ಜಿಗಳು ಸಲ್ಲಿಕೆಯಾಗಿದ್ದವು. ಇಂದು ಎಲ್ಲಾ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಾಧೀಶರು, ತಡೆ ನೀಡಲು ನಿರಾಕರಿಸಿದ್ದಾರೆ. ಅಲ್ಲದೆ ವಿಚಾರಣೆಗೂ ಮುನ್ನ ಸರ್ಕಾರಕ್ಕೆ ಅಭಿಪ್ರಾಯ ದಾಖಲಿಸುವಂತೆ ಸೂಚಿಸಿತ್ತು. ಇನ್ನು ಮೀಸಲಾತಿ ಹಾಗೂ ಪುನರ್ ವಿಂಗಡಣೆ ವಿಷಯದಲ್ಲಿ ವ್ಯತ್ಯಾಸಗಳಿದ್ದು, ಅವುಗಳನ್ನು ಸರಿಪಡಿಸಲಾಗಿಲ್ಲ. ಈ ಹಿನ್ನೆಲೆಯಲ್ಲಿ ಚುನಾವಣೆಗೆ ತಡೆ ನೀಡುವಂತೆ ಕೋರಿ ಅರ್ಜಿ ಸಲ್ಲಿಸಲಾಗಿತ್ತು.