ಬೈ ಎಲೆಕ್ಷನ್ ನಲ್ಲಿ ಕನಕಪುರ ಬಂಡೆ ಪುಡಿ ಪುಡಿ

ಬುಧವಾರ, 14 ಅಕ್ಟೋಬರ್ 2020 (16:36 IST)
ರಾಜ್ಯದಲ್ಲಿ ಬೈ ಎಲೆಕ್ಷನ್ ಕಾವು ದಿನೇ ದಿನೇ ಜೋರಾಗತೊಡಗಿದೆ.

ಈ ನಡುವೆ ರಾಜರಾಜೇಶ್ವರಿ ನಗರ ವಿಧಾನಸಭೆ ಕ್ಷೇತ್ರದಲ್ಲಿ ಬಿಜೆಪಿಯಿಂದ ಮುನಿರತ್ನ ಅಭ್ಯರ್ಥಿಯಾಗಿದ್ದಾರೆ.

ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿರುವ ಸಚಿವ ಆರ್.ಅಶೋಕ್, ಬೈ ಎಲೆಕ್ಷನ್ ನಲ್ಲಿ ಕಲ್ಲು ಬಂಡೆಯ ಆಟ ನಡೆಯೋದೇ ಇಲ್ಲ. ಬಂಡೆ ಕಥೆ ಪುಡಿ ಪುಡಿಯಾಗುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಪರೋಕ್ಷ ಟಾಂಗ್ ನೀಡಿದ್ದಾರೆ.
 

ಮುನಿರತ್ನ ಅವರು ಪಕ್ಷದ ಅಭ್ಯರ್ಥಿಯಾಗಿದ್ದರೂ ನಾನೇ ಅಭ್ಯರ್ಥಿ ಎಂದುಕೊಂಡು ಚುನಾವಣಾ ಪ್ರಚಾರ ನಡೆಸುವೆ. ಈ ಕ್ಷೇತ್ರದಲ್ಲಿ ಬಿಜೆಪಿ ಅರಳುವಂತೆ ಮಾಡುವ ಸಂಕಲ್ಪ ತೊಟ್ಟಿದ್ದೇನೆ ಎಂದು ಆರ್.ಅಶೋಕ್ ಹೇಳಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ