ರೋಷನ್ ಬೇಗ್ ಅಮಾನತು ಮಾಡಿದ್ದೆ ಸರಿ ಎಂದ ಸಚಿವ ಕೃಷ್ಣ ಭೈರೇಗೌಡ

ಬುಧವಾರ, 19 ಜೂನ್ 2019 (12:13 IST)
ಶಿವಮೊಗ್ಗ : ಕಾಂಗ್ರೆಸ್ ಪಕ್ಷದಿಂದ ರೋಷನ್ ಬೇಗ್ ಅಮಾನತು ಮಾಡಿರುವ ಪಕ್ಷದ ಕ್ರಮದ ಬಗ್ಗೆ ಸಚಿವ ಕೃಷ್ಣ ಭೈರೇಗೌಡ ಸಮರ್ಥನೆ ಮಾಡಿಕೊಂಡಿದ್ದಾರೆ.




ರೋಷನ್ ಬೇಗ್ ಒಬ್ಬ ಅವಕಾಶವಾದಿ ರಾಜಕಾರಣಿ. ಅವರನ್ನು ಮಂತ್ರಿ ಮಾಡಿದ್ದಿದ್ರೆ ಎಲ್ಲವೂ ಸರಿ ಇರುತ್ತಿತ್ತು. ಮಂತ್ರಿ ಮಾಡದೇ ಇರುವುದರಿಂದ ಈ ರೀತಿ ಹೇಳಿಕೆ ನೀಡಿದ್ದಾರೆ. ಅವರ ವಿರುದ್ಧ ಶಿಸ್ತುಕ್ರಮ ಕೈಗೊಂಡಿರುವುದು ಸರಿಯಾಗಿದೆ ಎಂದು  ಸಚಿವ ಕೃಷ್ಣ ಭೈರೇಗೌಡ  ಹೇಳಿದ್ದಾರೆ.


ಕೈ ನಾಯಕರ ಉದ್ಧಟತನವನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ. ಶಾಸಕರಾದ ರೋಷನ್ ಬೇಗ್, ರಮೇಶ್ ಜಾರಕಿಹೊಳಿ ಸಮ್ಮಿಶ್ರ ಸರ್ಕಾರದ ಬಗ್ಗೆ ಎಲ್ಲೇ ಮೀರಿ ಮಾತನಾಡುತ್ತಿದ್ದಾರೆ. ಅವರ ಆರೋಪಗಳು ನಿರಾಧಾರವಾಗಿದೆ .ಕೀಳುಮಟ್ಟದ ವರ್ತನೆ, ಇಂತಹ ನಡೆ ಸಹಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಸಚಿವ ಕೃಷ್ಣ ಭೈರೇಗೌಡ ಕಿಡಿಕಾರಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ