2 ವರ್ಷಗಳಿಂದ ತಲೆತಪ್ಪಿಸಿಕೊಂಡಿದ್ದ ರೌಡಿಶೀಟರ್ ಬಂಧನ

ಗುರುವಾರ, 24 ಮಾರ್ಚ್ 2016 (01:43 IST)
ಕಳೆದ 2 ವರ್ಷಗಳಿಂದ ಪೊಲೀಸರಿಂದ ತಲೆತಪ್ಪಿಸಿಕೊಂಡಿದ್ದ ರೌಡಿಶೀಟರ್ ಸೋಮಶೇಖರ್‌ನನ್ನು ಕಡೆಗೂ ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ. ಸೋಮಶೇಖರ ಗೌ ಡ ಬೆಂಗಳೂರು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯ ರೌಡಿ ಶೀಟರ್. ಪ್ರಭಾವಿ ಕಾಂಗ್ರೆಸ್ ನಾಯಕರೊಂದಿಗೆ ಒಡನಾಟ ಹೊಂದಿದ್ದ. ಹುನಗುಂದ ಶಾಸಕ ವಿಜಯಾನಂದ  ಕಾಶಪ್ಪನವರ ಜತೆ ಸ್ಕೈ ಬಾರ್‌ನಲ್ಲಿ ಕರ್ತವ್ಯನಿರತ ಪೊಲೀಸ್ ಪೇದೆಗಳ ಮೇಲೆ ಹಲ್ಲೆ ಮಾಡಿದ ಆರೋಪವನ್ನು ಹೊತ್ತಿದ್ದ.

ಪ್ರಕರಣದಲ್ಲಿ ಪೇದೆಗಳ ಕರ್ತವ್ಯ ನಿರ್ವಹಣೆಗೆ ಅಡ್ಡಿಪಡಿಸಿದ ರೌಡಿ ಶೀಟರ್ ಹಾಗೂ ಶಾಸಕರ ವಿರುದ್ದ ಕ್ರಮ ಗೊಳ್ಳಲು ಹಿರಿಯ ಅಧಿಕಾರಿಗಳು ಅವಕಾಶ ನೀಡಿರಲಿಲ್ಲ. ಬದಲಾಗಿ ಶಾಸಕರ ಗೂಂಡಾಗಿರಿ ವರ್ತನೆ ಪ್ರಕರಣವನ್ನು ಮುಚ್ಚಿಹಾಕುವ ಯತ್ನ ನಡೆ ಸಲಾಗುತ್ತಿದೆ ಎಂಬ ಆರೋಪಗಳು ಮಾಧ್ಯಮಗಳಲ್ಲಿ ಕೇಳಿಬಂದ ಬಳಿಕ ಎಚ್ಚೆತ್ತ ಪೊಲೀಸ್ ಅಧಿಕಾರಿಗಳು ಎಫ್‌ಐಆರ್ ದಾಖಲಿಸಿದ್ದರು.

 ಹೈಕೋರ್ಟ್‌ನಲ್ಲಿ ಅವನಿಗೆ ಜಾಮೀನು ನಿರಾಕರಿಸಿದ ಕಾರಣ ಸುಪ್ರೀಂಕೋರ್ಟ್ ಮೆಟ್ಟಿಲು ಹತ್ತಿದ್ದ. ಪ್ರಭಾವಿ ಕಾಂಗ್ರೆಸ್ ಮುಖಂಡರ ಬೆಂಬಲವಿದ್ದಿದ್ದರಿಂದ ಇಷ್ಟು ದಿನ ಕೈಗೆ ಸಿಗದೇ ತಪ್ಪಿಸಿಕೊಂಡಿದ್ದ ಸೋಮಶೇಖರ ಗೌಡ ಕೊನೆಗೂ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ. 

ವೆಬ್ದುನಿಯಾವನ್ನು ಓದಿ