ರೈತರ ಮಕ್ಕಳ ಉನ್ನತ ವಿದ್ಯಾಭ್ಯಾಸಕ್ಕೆ ಬೊಮ್ಮಾಯಿ ಬಂಪರ್ ಕೊಡುಗೆ ಘೋಷಣೆ
ದಕ್ಷ, ಪ್ರಮಾಣಿಕ ಹಾಗೂ ಜನಪರ ಆಡಳಿತ ನೀಡುವ ಉದ್ದೇಶ ಹೊಂದಿದ್ದು, ಕೇವಲ ಆದೇಶ ನೀಡುವುದಲ್ಲ. ಅನುಷ್ಠಾನದ ಕಡೆ ಗಮನ ಹರಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿರುವುದಾಗಿ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ ನಂತರ ಬೆಂಗಳೂರಿನ ವಿಧಾನಸೌಧದಲ್ಲಿ ಅಧಿಕಾರಿಗಳ ಜೊತೆ ಸಭೆ ನಡೆಸಿದ ನಂತರ ಮೊದಲ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮಾಜದ ಕಟ್ಟ ಕಡೆಯ ವ್ಯಕ್ತಿಗೆ ಯೋಜನೆ ತಲುಪಬೇಕು. ಕೇವಲ ಆದೇಶ ಘೋಷಣೆಗಳ ಮೂಲಕ ಸರಕಾರ ಭರವಸೆ ನೀಡುವುದಿಲ್ಲ. ಆದೇಶಗಳ ಅನುಷ್ಠಾನದಿಂದ ಯೋಜನೆಗಳನ್ನು ಜಾರಿಗೆ ತರಬೇಕು ಎಂದರು.