ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಒಬ್ಬ ಪುಕ್ಕಲ ಭಟ್: ಸಚಿವ ರೈ

ಭಾನುವಾರ, 18 ಜೂನ್ 2017 (13:07 IST)
ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಒಬ್ಬ ಪುಕ್ಕಲ.ಅವನೇನೂ ಅಂತ ನನಗೆ ಚೆನ್ನಾಗಿ ಗೊತ್ತಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ್ ರೈ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
 
ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಒಬ್ಬ ಪುಕ್ಕಲ, ಅವನನ್ನು ನಾನೇ ಕಾಲೇಜಿನಲ್ಲಿದ್ದಾಗ ಅಟ್ಟಾಡಿಸಿಕೊಂಡು ಹೋಗಿದ್ದೇ. ಆವಾಗ ಆತನ ಹುಡುಗರಲ್ಲ ನಾನಲ್ಲ, ನಾನಲ್ಲ ಎಂದಿದ್ದರು. ಅವನೊಬ್ಬ ಹೇಡಿ ಎಂದು ಗುಡುಗಿದ್ದಾರೆ.
 
ಮಂಗಳೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೂಷಣ್ ಕುಮಾರ್ ಅವರೊಂದಿಗೆ ಚರ್ಚೆ ನಡೆಸಿದ ಸಂದರ್ಭದಲ್ಲಿ ಕಲ್ಲಡ್ಕ ಪ್ರಭಾಕರ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
 
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ಹಿಂಸಾಚಾರದ ಘಟನೆಗಳಿಗೆ ಕಲ್ಲಡ್ಕ ಪ್ರಭಾಕರ್ ಪರೋಕ್ಷವಾಗಿ ಕಾರಣವಾಗಿರುವುದರಿಂದ ಆತನ ಮೇಲೆ 307 ಕೇಸ್ ದಾಖಲಿಸಿ ಏನೂ ಆಗಲ್ಲ ಎಂದು ಉಸ್ತುವಾರಿ ಸಚಿವ ರಮಾನಾಥ್ ರೈ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ನಿರ್ದೇಶನ ನೀಡಿದ್ದಾರೆ. 

 
ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ..
 
http://kannada.fantasycricket.webdunia.com/ 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ