ಗ್ರಾಮೀಣ ಕರ್ನಾಟಕ ಬಯಲು ಬಹಿರ್ದೆಸೆ ಮುಕ್ತ: ಸಿಎಂ ಘೋಷಣೆ

ಸೋಮವಾರ, 19 ನವೆಂಬರ್ 2018 (18:22 IST)
ಗ್ರಾಮೀಣ ಕರ್ನಾಟಕ ಪ್ರದೇಶ ಬಯಲು ಬಹಿರ್ದೆಸೆ ಮುಕ್ತವಾಗಿದೆ ಎಂದು ಮುಖ್ಯಮಂತ್ರಿ ಘೋಷಣೆ ಮಾಡಿದ್ದಾರೆ. 

ಬೆಂಗಳೂರಿನ ವಿಧಾನಸೌಧದಲ್ಲಿರುವ ಮಹಾತ್ಮಗಾಂಧಿ ಪ್ರತಿಮೆ ಹತ್ತಿರ ಏರ್ಪಡಿಸಲಾಗಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಗ್ರಾಮೀಣ ಕರ್ನಾಟಕ ಬಯಲು ಬಹಿರ್ದೆಸೆ ಮುಕ್ತವಾಗಿದೆ ಎಂದು ಘೋಷಣೆ ಮಾಡಿದರು.

ಈ ಹಿಂದಿನ ನಾಲ್ಕು ವರ್ಷಗಳಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ 45 ಲಕ್ಷಕ್ಕೂ ಹೆಚ್ಚು ಶೌಚಾಲಯ ನಿರ್ಮಾಣ ಮಾಡಲಾಗಿದೆ.

 ಗ್ರಾಮೀಣ ಪ್ರದೇಶಗಳಲ್ಲಿ ಶೌಚಾಲಯ ಸದ್ಬಳಕೆಗೆ ಎಲ್ಲ ಹಳ್ಳಿಗಳಿಗೂ  24 ಗಂಟೆ ನೀರು ಒದಗಿಸುವ ಜಲಧಾರೆ ಯೋಜನೆಗೆ ತ್ವರಿತ ಚಾಲನೆ ನೀಡುವುದಾಗಿ ಕುಮಾರಸ್ವಾಮಿ ತಿಳಿಸಿದ್ದಾರೆ.



ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ