ಎಸ್ ಎಂ ಕೃಷ್ಣ ಅಳಿಯ ನಾಪತ್ತೆ ಹಿನ್ನಲೆ; ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದ ಶಾಸಕ ಯು.ಟಿ.ಖಾದರ್

ಮಂಗಳವಾರ, 30 ಜುಲೈ 2019 (10:43 IST)
ಮಂಗಳೂರು : ಮಾಜಿ ವಿದೇಶಾಂಗ ಸಚಿವ ಎಸ್ ಎಂ ಕೃಷ್ಣ ಅಳಿಯ, ಕಾಫಿ ಡೇ ಮಾಲೀಕ ವಿ.ಜಿ ಸಿದ್ದಾರ್ಥ್ ಅವರು ಸೋಮವಾರ ರಾತ್ರಿಯಿಂದ ದಿಢೀರ್ ನಾಪತ್ತೆಯಾಗಿದ್ದಾರೆ.



ಈ ಹಿನ್ನಲೆಯಲ್ಲಿ ಶಾಸಕ ಯು.ಟಿ.ಖಾದರ್ ಅವರು ವಿ.ಜಿ ಸಿದ್ದಾರ್ಥ್ ಅವರು ನಾಪತ್ತೆಯಾದ ಮಂಗಳೂರಿನ ಉಳ್ಳಾಲ ಸಮೀಪದ ನೇತ್ರಾವತಿ ನದಿ ಸೇತುವೆ ಬಳಿ ಭೇಟಿ ನೀಡಿ ಮಾಹಿತಿ ಪಡೆದುಕೊಂಡಿದ್ದಾರೆ.

 

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ಧಾರ್ಥ್ ಅವರು ಈವರೆಗೂ ಸಾವಿರಾರು ಮಂದಿಗೆ ಕೆಲಸ ನೀಡಿದ್ದಾರೆ. ಅವರಿಗೆ ಅಧಿಕಾರ ಇದ್ದರೂ ಯಾವತ್ತೂ ಯಾರ ಮೇಲೂ ದರ್ಪ ತೋರಲಿಲ್ಲ. ನಮಗೆ ಯಾವಾತ್ತಾದರೂ ಸಿಕ್ಕಿದ್ದಾಗ ತುಂಬಾ ಪ್ರೀತಿಯಿಂದ, ಆತ್ಮೀಯತೆಯಿಂದ ಮಾತನಾಡಿಸುತ್ತಿದ್ದರು. ಸಿದ್ಧಾರ್ಥ್ ಅವರು ಇಲ್ಲಿ ಕಾಲು ಜಾರಿ ಬಿದ್ದಿದ್ದಾರಾ ಅಥವಾ ಬೇರೆ ಕಡೆ ಹೋಗಿದ್ದಾರಾ ಎಂಬ ಸ್ಪಷ್ಟ ಮಾಹಿತಿ ಸಿಕ್ಕಿಲ್ಲ. ಸದ್ಯಕ್ಕೆ ಪೊಲೀಸರು ಮತ್ತು ಜಿಲ್ಲಾಧಿಕಾರಿಗಳು ಶೋಧ ಕಾರ್ಯ ನಡೆಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ