ಎಸ್.ಎಂ.ಕೃಷ್ಣ ನೋವು ನುಂಗಿಕೊಂಡು ಪಕ್ಷದಲ್ಲಿಯೇ ಮುಂದುವರೆಯಲಿ: ಡಿಕೆಶಿ

ಶುಕ್ರವಾರ, 3 ಫೆಬ್ರವರಿ 2017 (18:12 IST)
ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರು ತಮ್ಮ ನೋವು ನುಂಗಿಕೊಂಡು ಕಾಂಗ್ರೆಸ್ ಪಕ್ಷದಲ್ಲಿಯೇ ಮುಂದುವರೆಯಬೇಕೆಂದು ಸಚಿವ ಡಿ.ಕೆ.ಶಿವಕುಮಾರ್ ಮನವಿ ಮಾಡಿಕೊಂಡಿದ್ದಾರೆ.
 
ಗೃಹ ಕಚೇರಿ ಕೃಷ್ಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಭೇಟಿ ಮಾಡಿ, ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೃಷ್ಣರ ಜೊತೆ ಮಾತನಾಡಲು ಕಾಲ ಕೂಡಿ ಬಂದಿಲ್ಲ. ಅವರು ಪಕ್ಷದಲ್ಲಿಯೇ ಮುಂದುವರೆಯಲಿ ಎಂದು ನಮ್ಮ ಆಸೆ ಎಂದರು. 
 
ಆರೇಳು ತಿಂಗಳಲ್ಲಿ ರಾಜ್ಯ ಸರಕಾರ ಪತನವಾಗಲಿದೆ ಎಂದು ಹೇಳಿಕೆ ನೀಡಿರುವ ಎಚ್‌.ಡಿ.ಕುಮಾರಸ್ವಾಮಿ ಅವರು ಅಲ್ಪಸ್ವಲ್ಪ ಭವಿಷ್ಯ ಹೇಳಲು ಕಲಿತಿರಬಹುದು, ಹಾಗಾಗಿ ಈ ರೀತಿಯ ಹೇಳಿಕೆ ನೀಡಿದ್ದಾರೆ ಎಂದು ವ್ಯಂಗ್ಯವಾಡಿದರು.
 
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಮಡಿಕೆಯ ಸರಕಾರವಲ್ಲ. ಇದು ಕಂಚಿನ ಸರಕಾರ, ಹುಣಸೇ ಹಾಕಿ ಉಜ್ಜಿದಷ್ಟು ಹೊಳಪು ಬರುತ್ತದೆ ಎಂದು ಸಚಿವ ಡಿ.ಕೆ.ಶಿವಕುಮಾರ್, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿಗೆ ತಿರುಗೇಟು ನೀಡಿದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ