ಎಸ್.ಎಂ.ಕೃಷ್ಣ ಪಕ್ಷಾಂತರಿಯಾಗಿದ್ದಾರೆ: ಕಾಗೋಡು ತಿಮ್ಮಪ್ಪ

ಮಂಗಳವಾರ, 4 ಏಪ್ರಿಲ್ 2017 (19:22 IST)
ರಾಜಕೀಯ ಸ್ವಚ್ಚತೆ, ಬದ್ಧತೆ ಇಲ್ಲದವರು ಪಕ್ಷಾಂತರಿಗಳಾಗಿದ್ದಾರೆ ಎಂದು ಕಂದಾಯ ಖಾತೆ ಸಚಿವ ಕಾಗೋಡು ತಿಮ್ಮಪ್ಪ  ಮಾಜಿ ಸಿಎಂ ಬಿಜೆಪಿ ಮುಖಂಡ ಎಸ್.ಎಂ.ಕೃಷ್ಣ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
 
ಪಕ್ಷದ ಎಲ್ಲಾ ರೀತಿಯ ಸ್ಥಾನಮಾನ ಅನುಭವಿಸಿ ಇದೀಗ ಪಕ್ಷಾಂತರಿ ಆಗಿದ್ದಾರೆ. ಪ್ರಸಕ್ತ ದಿನಗಳಲ್ಲಿ ರಾಜಕೀಯ ಹೇಸಿಗೆ ಹುಟ್ಟಿಸಿದೆ. ಕಾಂಗ್ರೆಸ್ ಪಕ್ಷದ ಕೊಡುಗೆಯನ್ನು ಮರೆತು ಕಾಂಗ್ರೆಸ್ ಪಕ್ಷವನ್ನೇ ಟೀಕಿಸುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
 
ಉಪಚುನಾವಣೆಯ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲುವುದು ಖಚಿತವಾಗಿದೆ ಎಂದು ಕಂದಾಯ ಖಾತೆ ಸಚಿವ ಕಾಗೋಡು ತಿಮ್ಮಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ