ಎಸ್. ಎಂ. ಶಂಕರ್ ನಿಧನಕ್ಕೆ ಸಚಿವ ಕೃಷ್ಣ ಭೈರೇಗೌಡ ಶೋಕ

ಶನಿವಾರ, 22 ಜೂನ್ 2019 (14:00 IST)
ಮಾಜಿ ವಿಧಾನ ಪರಿಷತ್ ಸದಸ್ಯ ಎಸ್. ಎ೦. ಶಂಕರ್ ಅವರ ನಿಧನಕ್ಕೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ಸಚಿವ ಕೃಷ್ಣ ಭೈರೇಗೌಡ ಶೋಕ ವ್ಯಕ್ತಪಡಿಸಿದ್ದಾರೆ.

ಎಸ್. ಎಂ. ಶಂಕರ್  ಸರಳ ನಡವಳಿಕೆಯ ಸಜ್ಜನ ವ್ಯಕ್ತಿಯಾಗಿದ್ದರು. ಅವರ ನಿಧನದಿಂದ ಉತ್ತಮ ವ್ಯಕ್ತಿಯೊಬ್ಬರನ್ನು ಕಳೆದುಕೊಂಡಂತಾಗಿದೆ.

ಅವರ ಅಗಲಿಕೆಯ  ದುಃಖ ಭರಿಸುವ ಶಕ್ತಿ ಅವರ ಕುಟುಂಬಕ್ಕೆ ಸಿಗಲಿ ಎಂದು ಅವರು  ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

ವಿಧಾನ ಪರಿಷತ್ ಮಾಜಿ ಸದಸ್ಯ ಎಸ್.ಎಂ.ಶಂಕರ್ ಅವರು ಕೇಂದ್ರ ಮಾಜಿ ಸಚಿವ, ಮಾಜಿ ಸಿಎಂ ಹಾಗೂ ಬಿಜೆಪಿ ನಾಯಕ ಎಸ್.ಎಂ.ಕೃಷ್ಣ ಅವರ ಸಹೋದರರಾಗಿದ್ದಾರೆ.



ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ