ಧಾರವಾಡ: ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಸಚಿವ ದಿನೇಶ ಗುಂಡೂರಾವ್ ಹಾಗೂ ಅವರ ಕುಟುಂಬ 720 ಕೋಟಿ ಮೌಲ್ಯದ ಭೂ ಕಬಳಿಕೆಯನ್ನು ಮಾಡಿದೆ ಎಂದು ಸಮಾಜ ಪರಿವರ್ತನ ಸಮುದಾಯದ ಸಂಸ್ಥಾಪಕ ಅಧ್ಯಕ್ಷ ಎಸ್.ಆರ್. ಹಿರೇಮಠ ಆರೋಪಿಸಿದ್ದಾರೆ. 47.16 ಎಕರೆ ಸಾರ್ವಜನಿಕ ಭೂಮಿಯನ್ನು ಕಬಳಿಕೆ ಮಾಡಿದ್ದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಬಿಡುಗಡೆ ಮಾಡಿದ ಅವರು ಗುಂಡೂರಾವ್ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದರು.
550 ಕೋಟಿ ರೂ. ಮೌಲ್ಯದ ಸರ್ಕಾರಿ ಭೂಮಿಯ ಕಬಳಿಕೆಯಿಂದ ಸಂಪಾದಿಸಿದ ಹಣವನ್ನು ವಶಕ್ಕೆತೆಗೆದುಕೊಳ್ಳಲು ಕ್ರಮಕೈಗೊಳ್ಳುವಂತೆ ಅವರು ಮುಖ್ಯಮಂತ್ರಿಗೆ ಒತ್ತಾಯಿಸಿದರು. ಎ.ಟಿ. ರಾಮಸ್ವಾಮಿ ಸಮಿತಿ ವರದಿ ಪ್ರಕಾರ, ಯಲಹಂಕದ ಬೆಂಗಳೂರು ಉತ್ತರತಾಲೂಕು ನವರತ್ನ ಅಗ್ರಹಾರ ಗ್ರಾಮದಲ್ಲಿ 47. 16 ಎಕರೆ ಭೂಮಿಯನ್ನು ಕಬಳಿಕೆ ಮಾಡಲಾಗಿದೆ ಎಂದು ಹಿರೇಮಠ್ ಆರೋಪಿಸಿದರು.