ದಿನೇಶ್ ಗುಂಡುರಾವ್ ಅವರನ್ನು ಸಂಪುಟದಿಂದ ಕೈಬಿಡಿ: ಈಶ್ವರಪ್ಪ

ಬುಧವಾರ, 12 ನವೆಂಬರ್ 2014 (14:44 IST)
ಆಹಾರ ಖಾತೆ ಸಚಿವ ದಿನೇಶ್ ಗುಂಡೂರಾವ್ ಅವರ ಭೂ ಕಬಳಿಕೆ ಹಗರಣದ ಬಗ್ಗೆ ತಹಸೀಲ್ದಾರ್ ಮತ್ತು ಜಿಲ್ಲಾಧಿಕಾರಿಗಳು ವರದಿ ನೀಡಿದ್ದರಿಂದ ಅವರ ವಿರುದ್ಧದ ಆರೋಪ ಸಾಬೀತಾಗಿದೆ. ಅವರನ್ನು ಮುಖ್ಯಮಂತ್ರಿಗಳು ಸಚಿವ ಸಂಪುಟದಿಂದ ಕೈ ಬಿಡಬೇಕು ಎಂದು ಬಿಜೆಪಿ ನಾಯಕ ಮಾಜಿ ಡಿಸಿಎಂ ಈಶ್ವರಪ್ಪ ಒತ್ತಾಯಿಸಿದ್ದಾರೆ.
 
ಸಚಿವ ದಿನೇಶ್ ಗುಂಡೂರಾವ್ ಅವರ ಭೂ ಕಬಳಿಕೆ ಹಗರಣದ ಬಗ್ಗೆ ಕಂದಾಯ ಸಚಿವರಾಗಲಿ ಅಥವಾ ಮುಖ್ಯಮಂತ್ರಿಗಳಾಗಲಿ ಬಾಯಿ ಬಿಡುತ್ತಿಲ್ಲ. ಭ್ರಷ್ಟರಿಗೆ ಸಿದ್ದರಾಮಯ್ಯ ನೇತೃತ್ವದ ಸರಕಾರ ಮಣೆ ಹಾಕುತ್ತಿದೆ ಎಂದು ಆರೋಪಿಸಿದ್ದಾರೆ.
 
ಸರಕಾರ ಕೂಡಲೇ ದಿನೇಶ್ ಗುಂಡೂರಾವ್ ಕಬಳಿಸಿದ ಭೂಮಿಯನ್ನು ವಶಕ್ಕೆ ತೆಗೆದುಕೊಂಡು ಅವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು ಎಂದು ಕಿಡಿಕಾರಿದ್ದಾರೆ.
 
 
 

ವೆಬ್ದುನಿಯಾವನ್ನು ಓದಿ