ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಈ ಬಾರಿ ಸಿನಿಮಾ ಕಲಾವಿದರ ದಂಡು

ಸೋಮವಾರ, 4 ಮಾರ್ಚ್ 2019 (10:32 IST)
ಮಂಡ್ಯ: ಮಂಡ್ಯ ಲೋಕಸಭೆ ಕ್ಷೇತ್ರದಿಂದ ಕಣಕ್ಕಿಳಿಯುವುದಾಗಿ ಜೆಡಿಎಸ್ ನಿಂದ ನಿಖಿಲ್ ಕುಮಾರಸ್ವಾಮಿ ಸ್ಪಷ್ಟಪಡಿಸುತ್ತಿದ್ದಂತೆ ಈ ಬಾರಿ ಈ ಕ್ಷೇತ್ರದಲ್ಲಿ ಸಿನಿ ಲೋಕದ ದಂಡೇ ಪ್ರಚಾರಕ್ಕೆ ಬರುವುದು ಗ್ಯಾರಂಟಿಯಾಗಿದೆ.


ಈಗಾಗಲೇ ಮಂಡ್ಯದಲ್ಲಿ ರೆಬಲ್‍ ಸ್ಟಾರ್ ಅಂಬರೀಶ್ ಪತ್ನಿ ಸುಮಲತಾ ಸ್ಪರ್ಧೆಗಿಳಿಯುವುದಾಗಿ ಹೇಳಿಕೊಂಡಿದ್ದಾರೆ. ಕಾಂಗ್ರೆಸ್ ಟಿಕೆಟ್ ಸಿಕ್ಕರೆ, ಕಾಂಗ್ರೆಸ್ ನಿಂದ ಇಲ್ಲವಾದರೆ ಸ್ವತಂತ್ರವಾಗಿಯಾದರೂ ಕಣಕ್ಕಿಳಿಯುವುದಾಗಿ ಹೇಳಿಕೊಂಡಿದ್ದಾರೆ.

ಸುಮಲತಾ ಪರವಾಗಿ ಚಾಲೆಂಜಿಂಗ್ ಸ್ಟಾರ್ ದರ್ಶನ್, ಮುಂತಾದ ಘಟಾನುಘಟಿ ನಾಯಕರು ಇಲ್ಲಿ ಪ್ರಚಾರಕ್ಕೆ ಬರುವುದು ಗ್ಯಾರಂಟಿ. ಅತ್ತ ನಿಖಿಲ್ ಕೂಡಾ ಈಗಾಗಲೇ ಸಿನಿಮಾಗಳಲ್ಲಿ ನಾಯಕ ನಟರಾಗಿ ನಟಿಸಿದ್ದು, ಕುಮಾರಸ್ವಾಮಿಗೂ ಸಿನಿಮಾ ನಂಟಿದೆ. ಹೀಗಾಗಿ ಈ ಬಾರಿ ಮಂಡ್ಯ ಕ್ಷೇತ್ರದ ಅಭ್ಯರ್ಥಿಗಳ ಪರ ಸಿನಿ ಲೋಕದ ತಾರೆಯರೇ ಇಲ್ಲಿಗೆ ಬಂದಿಳಿಯುವುದು ಗ್ಯಾರಂಟಿಯಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ