ಸಂಗೊಳ್ಳಿ ರಾಯಣ್ಣ ಬ್ರಿಗೇಡ್‌ನಿಂದ ಹಾವೇರಿಯಲ್ಲಿ ಬೃಹತ್ ಸಮಾವೇಶ

ಗುರುವಾರ, 18 ಆಗಸ್ಟ್ 2016 (14:34 IST)
ಈಗಿನ ಸರಕಾರ ನಮ್ಮೆಲ್ಲಾ ನಿರೀಕ್ಷೆಗಳನ್ನು ಹುಸಿಗೊಳಿಸಿರುವ ಹಿನ್ನೆಲೆಯಲ್ಲಿ 'ಹಿಂದ' ಸಂಘಟನೆಗೆ ಮುಂದಾಗಿದ್ದೇವೆ ಎಂದು ಮಾಜಿ ಸಂಸದ ಹಾಗೂ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಸಂಚಾಲಕ ವಿರೂಪಾಕ್ಷಪ್ಪ ಸ್ಪಷ್ಟಪಡಿಸಿದ್ದಾರೆ.
 
ಬೆಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಸ್ಥಾಪನೆಗಾಗಿ ಮೂರು ಸುತ್ತಿನ ಸಭೆ ನಡೆಸಲಾಗಿದೆ. ಹಾವೇರಿಯಲ್ಲಿ ಬೃಹತ್ ಸಮಾವೇಶ ನಡೆಸುವ ಕುರಿತು ಚರ್ಚೆ ನಡೆಸಲಾಗಿದೆ. ರಾಜ್ಯಾದ್ಯಂತ ಸಂಘಟನೆಯ ಸಂಚಾಲಕರನ್ನು ನೇಮಕ ಮಾಡಲಾಗಿದೆ ಎಂದು ತಿಳಿಸಿದರು.
 
ಬೆಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಜಿ ಮೇಯರ್ ವೆಂಕಟೇಶಮೂರ್ತಿ ಸೇರಿದಂತೆ ಹಿಂದ ನಾಯಕ ಮುಕುಡಪ್ಪ ಹಾಗೂ ಮತ್ತಿತ್ತರು ಭಾಗಿಯಾಗಿದ್ದರು.
 
ಇದೇ ವೇಳೆ ಮಾತನಾಡಿದ ಹಿಂದ ನಾಯಕ ಮುಕುಡಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪನವರೇ ನಮ್ಮ ನಾಯಕರು. ಯಾರನ್ನು ವೈಭವಿಕರೀಸುವ ಉದ್ದೇಶ ನಮಗಿಲ್ಲ. ಯಡಿಯೂರಪ್ಪನವರ ಮೂಲಕ ದಲಿತರು ಹಾಗೂ ಹಿಂದುಳಿದ ವರ್ಗದವರಿಗೆ ಅವಕಾಶಕೊಡಿಸುವುದು ನಮ್ಮ ಗುರಿ ಎಂದು ಹೇಳಿದರು.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ