ಹುಣಸೂರು ಪ್ರತ್ಯೇಕ ಜಿಲ್ಲೆಗೆ ಆಗ್ರಹ; ಸಿಎಂ ಇಕ್ಕಟ್ಟಿಗೆ ಸಿಲುಕಿಸಲು ಯತ್ನ ಎಂದ ಸಾ.ರಾ.ಮಹೇಶ್

ಸೋಮವಾರ, 14 ಅಕ್ಟೋಬರ್ 2019 (11:48 IST)
ಬೆಂಗಳೂರು : ಹುಣಸೂರು ಪ್ರತ್ಯೇಕ ಜಿಲ್ಲೆ ಆಗಬೇಕೆಂದು ಹೆಚ್.ವಿಶ್ವನಾಥ್ ಆಗ್ರಹಿಸಿದ್ದು, ಸಿಎಂ ಯಡಿಯೂರಪ್ಪ ಅವರನ್ನು ಇಕ್ಕಟ್ಟಿಗೆ ಸಿಲುಕಿಸಲು ಯತ್ನ ಎಂದು ಸಾ.ರಾ.ಮಹೇಶ್ ಹೇಳಿದ್ದಾರೆ.   




ಈ ಬಗ್ಗೆ ಮಾತನಾಡಿದ ಸಾರಾ ಮಹೇಶ್, ವಿಶ್ವನಾಥ್ ಚುನಾವಣೆಗಾಗಿ ಈ ರೀತಿ ಹೇಳಿಕೆ ನೀಡಿದ್ದಾರೆ. ಮುಂಬೈಗೆ ಹೋಗಿದ್ದಾಗ ಯಾಕೆ ಇದು ನೆನಪಿಗೆ ಬರಲಿಲ್ಲ? 14 ತಿಂಗಳು ಶಾಸಕರಾಗಿದ್ದಾಗ ಯಾಕೆ ಈ ಬಗ್ಗೆ ಧ್ವನಿ ಎತ್ತಲಿಲ್ಲ.? ಎಂದು ಪ್ರಶ್ನಿಸಿದ್ದಾರೆ.


ಜಿಲ್ಲೆ ಮಾಡಿದ್ರೆ ಆಗುವ ಸಮಸ್ಯೆಗಳ ಬಗ್ಗೆ ಚರ್ಚೆಯಾಗಬೇಕು. ಹುಣಸೂರು ಅಭಿವೃದ್ಧಿ ದೃಷ್ಟಿಯಿಂದ ಜಿಲ್ಲೆಯಾದರೆ ಆಗಲಿ. ಆದರೆ ಈಗ ಯಾಕೆ ಈ ಬಗ್ಗೆ ಧ್ವನಿ ಎತ್ತಿದ್ದಾರೆ? ಎಂದು ಸಾರಾ ಮಹೇಶ್ ಹೇಳಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ