ಎಚ್ ಡಿ ಕುಮಾರಸ್ವಾಮಿ, ದೇವೇಗೌಡ ಭೇಟಿಯಾದ ಸತೀಶ್ ಜಾರಕಿಹೊಳಿ: ಕಾಂಗ್ರೆಸ್ ಒಳಗೇ ಹಲ್ ಚಲ್
ರಾಜ್ಯದಲ್ಲಿ ಒಂದೆಡೆ ಡಿಕೆ ಶಿವಕುಮಾರ್ ಸಂವಿಧಾನ ಬದಲಾವಣೆ ಹೇಳಿಕೆ ವಿವಾದ ಸೃಷ್ಟಿಸಿದ್ದರೆ ಇತ್ತ ದೆಹಲಿಯಲ್ಲಿ ಸತೀಶ್ ಜಾರಕಿಹೊಳಿ ಜೆಡಿಎಸ್ ಧುರೀಣರಾದ ಎಚ್ ಡಿ ಕುಮಾರಸ್ವಾಮಿ ಮತ್ತು ದೇವೇಗೌಡರನ್ನು ಭೇಟಿಯಾಗಿ ಅಚ್ಚರಿ ಮೂಡಿಸಿದ್ದಾರೆ.
ಈ ಭೇಟಿಯ ಉದ್ದೇಶವೇನೆಂದ ಶುಕ್ರವಾರ ಹೇಳುವೆ. ಇನ್ನೂ ಕೆಲವು ನಾಯಕರನ್ನು ದೆಹಲಿಯಲ್ಲಿ ಭೇಟಿ ಮಾಡುವುದಿದೆ ಎಂದು ಸತೀಶ್ ಜಾರಕಿಹೊಳಿ ಮಾಧ್ಯಮಗಳಿಗೆ ಹೇಳಿದ್ದಾರೆ. ರಾಜ್ಯದಲ್ಲಿ ಹನಿಟ್ರ್ಯಾಪ್, ಸಂವಿಧಾನ ಬದಲಾವಣೆ ವಿವಾದ, ಮುಸ್ಲಿಂ ಮೀಸಲಾತಿ ವಿಚಾರಗಳು ಗದ್ದಲ ಸೃಷ್ಟಿಸಿರುವಾಗ ಸತೀಶ್-ಜೆಡಿಎಸ್ ನಾಯಕರ ಭೇಟಿ ಕುತೂಹಲ ಮೂಡಿಸಿದೆ.
ಹನಿಟ್ರ್ಯಾಪ್ ಬಗ್ಗೆ ಮುಖ್ಯವಾಗಿ ಚರ್ಚೆ ನಡೆದಿದೆ ಎನ್ನಲಾಗಿದೆ. ಡಿಕೆ ಶಿವಕುಮಾರ್ ಮೇಲೆ ತೂಗುಗತ್ತಿ ಇರುವಾಗ ಅವರ ಪರಮ ಎದುರಾಳಿ ಕುಮಾರಸ್ವಾಮಿಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿರುವುದು ಕುತೂಹಲಕ್ಕೆ ಕಾರಣವಾಗಿದೆ.