ಬೆಂಗಳೂರು: ಕನ್ನಡ ಮಾತನಾಡಲ್ಲ ಎಂದು ಬೆಂಗಳೂರಿನ ಎಸ್ ಬಿಐ ಬ್ಯಾಂಕ್ ಶಾಖೆಯ ಅಧಿಕಾರಿಯೊಬ್ಬರು ಧಿಮಾಕು ತೋರಿದ್ದರು. ಇದೀಗ ಘಟನೆ ಬಗ್ಗೆ ಆಕ್ರೋಶವ್ಯಕ್ತವಾಗುತ್ತಿದ್ದಂತೇ ಉಲ್ಟಾ ಹೊಡೆದಿದ್ದಾರೆ.
ಬೆಂಗಳೂರಿನ ಆನೇಕಲ್ ತಾಲೂಕಿನ ಚಂದಾಪುರದ ಎಸ್ ಬಿಐ ಶಾಖೆಯ ವ್ಯವಸ್ಥಾಪಕಿಯೊಬ್ಬರು ಗ್ರಾಹಕರೊಂದಿಗೆ ಕನ್ನಡ ಮಾತನಾಡಲ್ಲ ಎಂದಿದ್ದಲ್ಲದೆ, ಇದು ಇಂಡಿಯಾ ಹಿಂದಿ ರಾಷ್ಟ್ರ ಭಾಷೆ ಎಂದು ದರ್ಪ ತೋರಿದ್ದರು. ಅವರ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು.
ಇದೀಗ ತಮ್ಮ ವಿಡಿಯೋ ವೈರಲ್ ಆಗುತ್ತಿದ್ದಂತೇ ಮಹಿಳಾ ಅಧಿಕಾರಿ ಕ್ಷಮೆ ಯಾಚಿಸಿದ್ದಾರೆ. ಕೆಲವು ಕನ್ನಡ ಸಂಘಟನೆಗಳು ಬ್ಯಾಂಕ್ ಗೆ ತೆರಳಿ ಅಧಿಕಾರಿಯನ್ನು ಪ್ರಶ್ನಿಸುತ್ತಿದ್ದಂತೇ ವರಸೆ ಬದಲಿಸಿದ್ದು, ಇನ್ನು ಮುಂದೆ ಹೀಗಾಗದಂತೆ ನೋಡಿಕೊಳ್ಳುತ್ತೇನೆ. ಕನ್ನಡ ಮಾತನಾಡಲು ಪ್ರಯತ್ನಿಸುತ್ತೇನೆ ಎಂದು ಕ್ಷಮೆ ಯಾಚಿಸಿದ್ದಾರೆ.