ಶತಾಬ್ದಿ ಸೂಪರ್ಫಾಸ್ಟ್ ರೈಲುಗಳ ವೇಳಾಪಟ್ಟಿ ಬದಲಾವಣೆ
ರೈಲುಗಳ ವೇಳಾಪಟ್ಟಿಯ ಬಗ್ಗೆ ಪರಿಶೀಲಿಸಿ ಕ್ರಮ ವಹಿಸುವಂತೆ ರೈಲ್ವೆ ಮಂತ್ರಾಲಯವನ್ನು ಪತ್ರ ಮುಖೇನ ಕೋರಲಾಗಿದೆ. ರೈಲ್ವೆ ಅಧಿಕಾರಿಗಳು ಇದು ಕಷ್ಟ ಅನ್ನುತ್ತಿದ್ದಾರೆ.
ಈ ಬಗ್ಗೆ ಮುಖ್ಯಮಂತ್ರಿಗಳು ಹಾಗೂ ರೈಲ್ವೆ ಸಚಿವರೊಂದಿಗೆ ಚರ್ಚಿಸಿ ಜನತೆಗೆ ಅನುಕೂಲ ಕಲ್ಪಿಸಿಕೊಡಲಾಗುವುದು ಎಂದು ಸಚಿವರು ತಿಳಿಸಿದರು.
ವಿಧಾನ ಪರಿಷತ್ತಿನಲ್ಲಿ ಸದಸ್ಯ ಮರಿತಿಬ್ಬೇಗೌಡ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು, ಮಂಡ್ಯದಲ್ಲಿ ಈ ಎರಡೂ ರೈಲುಗಳಿಗೂ ಸಹ ನಿಲುಗಡೆ ಒದಗಿಸಬೇಕೆಂಬ ಸದಸ್ಯರ ಕೋರಿಕೆಯ ಬಗ್ಗೆಯೂ ಅಗತ್ಯ ಕ್ರಮಕೈಗೊಳ್ಳುವಂತೆ ಮಂತ್ರಾಲಯಕ್ಕೆ ಪತ್ರದ ಮುಖೇನ ತಿಳಿಸಲಾಗಿದೆ ಎಂದು ವಿವರಿಸಿದರು.