ಮೃತ ಬಾಲಕಿಯನ್ನು ಶ್ರೀನಿಧಿ(3) ಎನ್ನಲಾಗಿದ್ದು, ಬಾಲಕಿ ತಮ್ಮ ಮನೆಯ ಮುಂಬಾಗದ ರಸ್ತೆಯಲ್ಲಿ ಆಟವಾಡುತ್ತಿದ್ದಳು ಎನ್ನಲಾಗಿದೆ. ಈ ವೇಳೆ, ಬಾಲಕಿ ಇದ್ದ ಹಾದಿಯಲ್ಲಿಯೇ ಸಾಗುತ್ತಿದ್ದ ಶಾಲಾ ಬಸ್ ಬಾಲಕಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ತಲೆಗೆ ಅಗಾಧ ಪೆಟ್ಟು ಬಿದ್ದು ತೀವ್ರ ರಕ್ತ ಸ್ರಾವವಾದ ಹಿನ್ನೆಲೆಯಲ್ಲಿ ಬಾಲಕಿ ಅಸ್ವಸ್ಥಗೊಂಡಿದ್ದಾಳೆ. ತಕ್ಷಣವೇ ಗಾಯಾಳು ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲು ರವಾನಿಸಲಾಗುತ್ತಿತ್ತು. ಆದರೆ ಪ್ರಯಾಣ ಮಧ್ಯೆಯಲ್ಲಿಯೇ ಬಾಲಕಿ ಮೃಪಟ್ಟಿದ್ದಾಳೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಬಸ್ ನಾರಾಯಣ ಶಿಕ್ಷಣ ಸಂಸ್ಥೆಗೆ ಸೇರಿದ್ದಾಗಿದ್ದು, ಬಸ್ ಚಾಲಕ ಕೆಂಪೇಗೌಡ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.