ತಜ್ಞರು ಸಲಹೆ ನೀಡಿದ್ರೂ ಸದ್ಯಕ್ಕೆ ಶಾಲೆ ಆರಂಭಿಸಲ್ಲ ಎಂದು ಸಿಎಂ

ಬುಧವಾರ, 23 ಜೂನ್ 2021 (09:14 IST)
ಬೆಂಗಳೂರು: ಕೊರೋನಾ ಮೂರನೇ ಅಲೆ ತಡೆಯುವ ನಿಟ್ಟಿನಲ್ಲಿ ಸರ್ಕಾರಕ್ಕೆ ವರದಿ ಸಲ್ಲಿಸಿದ ಡಾ. ದೇವಿಪ್ರಸಾದ್ ಶೆಟ್ಟಿ ನೇತೃತ್ವದ ತಜ್ಞರ ಸಮಿತಿ ಶಾಲೆ ಆರಂಭಿಸಲು ಸಲಹೆ ನೀಡಿತ್ತು.


ಹಂತ ಹಂತವಾಗಿ ಸಮ-ಬೆಸ ಆಧಾರದಲ್ಲಿ ಶಾಲೆ ಆರಂಭಿಸಬಹುದು ಎಂದು ತಜ್ಞರ ಸಮಿತಿ ಸಲಹೆ ನೀಡಿತ್ತು. ಈ ವಿಚಾರ ಬಹಿರಂಗವಾಗುತ್ತಿದ್ದಂತೇ ಪೋಷಕರಿಂದ ವಿರೋಧ ವ್ಯಕ್ತವಾಗಿತ್ತು.

ಇದೀಗ ಸ್ವತಃ ಸಿಎಂ ಯಡಿಯೂರಪ್ಪ ಈ ಬಗ್ಗೆ ಸ್ಪಷ್ಟನೆ ನೀಡಿದ್ದು, ತಜ್ಞರು ಸಲಹೆ ನೀಡಿದರೂ, ಸದ್ಯಕ್ಕೆ ಶಾಲೆ ಆರಂಭಿಸಲ್ಲ ಎಂದಿದ್ದಾರೆ. ಸದ್ಯಕ್ಕೆ ಕೇವಲ ಕಾಲೇಜು ತೆರೆಯಲು ಅನುಮತಿ ನೀಡಲಾಗುವುದು. ಅದೂ ವಿದ್ಯಾರ್ಥಿಗಳಿಗೆ ಸಂಪೂರ್ಣವಾಗಿ ಲಸಿಕೆ ನೀಡಿದ ಬಳಿಕವೇ ಕಾಲೇಜು ತೆರೆಯಲು ಅವಕಾಶ ನೀಡಲಾಗುವುದು ಎಂದಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ