ರಾಘವೇಶ್ವರ ಶ್ರೀ ವಿರುದ್ಧದ 2ನೇ ಅತ್ಯಾಚಾರ ಪ್ರಕರಣ: ಶ್ರೀಗಳ ಬಂಧನ ?

ಬುಧವಾರ, 30 ಸೆಪ್ಟಂಬರ್ 2015 (11:44 IST)
ತಮ್ಮ ವಿರುದ್ಧ ದಾಖಲಾಗಿದ್ದ ಎರಡನೇ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಮಚಂದ್ರಾಪುರ ಮಠದ ಪೀಠಾಧ್ಯಕ್ಷ ರಾಘವೇಶ್ವರ ಶ್ರೀಗಳು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆಯು ನ್ಯಾಯಾಲಯದಲ್ಲಿ ಇಂದು ವಿಚಾರಣೆಗೆ ಬರಲಿದ್ದು ಶ್ರೀಗಳಿಗೆ ಬಂಧನ ಭೀತಿ ಎದುರಾಗಿದೆ.  
 
ತಮ್ಮ ವಿರುದ್ಧ ದಾಖಲಾಗಿದ್ದ ಎರಡನೇ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಅರ್ಜಿ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಅರ್ಜಿಯ ವಿಚಾರಣೆಯು ಇಂದು ನಡೆಯಲಿದ್ದು, ಇಂದೇ ತೀರ್ಪೂ ಕೂಡ ಪ್ರಕಟವಾಗಲಿದೆ. ಶ್ರೀಗಳು ಮೊದಲನೇ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಜಾಮೀನು ಪಡೆಯುವಲ್ಲಿ ಸಫಲರಾಗಿದ್ದು, ಇದರಲ್ಲಿಯೂ ಕೂಡ ಜಯ ಸಿಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ರಾಘವೇಶ್ವರ ಶ್ರೀಗಳಿಗೆ ಇದು ಮತ್ತೊಂದು ಕಂಟಕವಾಗಿ ಪರಿಣಮಿಸಿದೆ. 
 
ಇನ್ನು ಶ್ರೀಗಳ ವಿರುದ್ಧ ನಗರದ ಗಿರಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದ ಸಂತ್ರಸ್ತ ಮಹಿಳೆ, ಶ್ರೀಗಳು ತನ್ನ ಮೇಲೆ 2009 ಮತ್ತು 2012ರಲ್ಲಿ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಿ ದೂರು ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ಶ್ರೀಗಳು ನಿರೀಕ್ಷಣಾ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು.   

ವೆಬ್ದುನಿಯಾವನ್ನು ಓದಿ