ಈ ಕನ್ನಡಿಗರೆಲ್ಲರನ್ನು ಜೈಲಿಗೆ ಕಳುಹಿಸಿ ಮೈ ಲಾರ್ಡ್: ಕಾಟ್ಜು

ಶುಕ್ರವಾರ, 30 ಸೆಪ್ಟಂಬರ್ 2016 (19:07 IST)
ಕಾವೇರಿ ನದಿಯಿಂದ ತಮಿಳುನಾಡಿಗೆ ನೀರು ಹರಿಸದ ಹಿನ್ನೆಲೆಯಲ್ಲಿ ಈ ಕನ್ನಡಿಗರೆಲ್ಲರನ್ನು ಜೈಲಿಗೆ ಕಳುಹಿಸಿ ಎಂದು ಮಾಜಿ ನ್ಯಾಯಮೂರ್ತಿ ಮಾರ್ಕಂಡೇಯ ಕಾಟ್ಜು ವಿವಾದಾತ್ಮಕ ಟ್ವೀಟ್ ಮಾಡಿದ್ದಾರೆ.
ಕಾವೇರಿ ನದಿಯಿಂದ ತಮಿಳುನಾಡಿಗೆ ನೀರು ಹರಿಸುವಂತೆ ಸುಪ್ರೀಂಕೋರ್ಟ್ ಆದೇಶ ನೀಡಿದೆ. ಆದರೆ, ಕರ್ನಾಟಕ ಸರಕಾರ ತಮಿಳುನಾಡಿಗೆ ನೀರು ಹರಿಸುತ್ತಿಲ್ಲ ಎಂದು ಆರೋಪಿಸಿ ಕಾಟ್ಜು ಟ್ವಿಟರ್‌ನಲ್ಲಿ ವಿವಾದಾತ್ಮಕ ಟ್ವೀಟ್ ಮಾಡಿದ್ದಾರೆ. 
 
ಸೆಪ್ಟೆಂಬರ್ 20 ರಂದು ಮೂರು ದಿನಗಳ ಕಾಲ ಒಟ್ಟು 18 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಸುಪ್ರೀಂಕೋರ್ಟ್ ಆದೇಶ ನೀಡಿತ್ತು. ಆದರೆ, ಕರ್ನಾಟಕ ಸರಕಾರ ವಿಶೇಷ ವಿಧಾನ ಮಂಡಲ ಅಧಿವೇಶನ ಕರೆದು ತಮಿಳುನಾಡಿಗೆ ನೀರು ಹರಿಸದಂತೆ ಒಮ್ಮತದ ನಿರ್ಣಯ ಕೈಗೊಂಡಿತ್ತು.
 
ಇದೀಗ ಮತ್ತೊಮ್ಮೆ ಆಕ್ಟೋಬರ್ 1 ರಿಂದ ಆರು ದಿನಗಳ ಕಾಲ 6 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಆದೇಶ ನೀಡದ್ದರೂ ಕರ್ನಾಟಕ ಸರಕಾರ ಮೀನಾಮೇಷ ಎಣಿಸುತ್ತಿದೆ ಎಂದು ಮಾಜಿ ನ್ಯಾಯಮೂರ್ತಿ ಮಾರ್ಕಂಡೇಯ್ ಕಾಟ್ಜು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ