ಹಿರಿಯ ವಕೀಲ ಶಂಕರಪ್ಪ ಉಚ್ಚಾಟನೆ .. ಸ್ವಾಮೀಜಿ ಪರ ವಕಾಲತ್ತು ಆಪತ್ತು

ಶುಕ್ರವಾರ, 2 ಸೆಪ್ಟಂಬರ್ 2022 (15:21 IST)
ಮುರುಘಾ ಸ್ವಾಮೀಜಿ ಪರವಾಗಿ ನಿಂತ ಹಿರಿಯ ವಕೀಲರಾದ ಶಂಕರಪ್ಪರವರನ್ನು ಭಾರತ ಕಮ್ಯುನಿಸ್ಟ್ ಪಕ್ಷ(ಮಾರ್ಕ್ಸವಾದಿ) ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ. ಮುರುಘಾ ಮಠದಲ್ಲಿ ನಡೆದ ಅಪ್ರಾಪ್ತರ ಮೇಲಿನ ಲೈಂಗಿಕ ದೌರ್ಜನ್ಯದ ಪ್ರಕರಣಕ್ಕೆ ಸಂಬಂಧಿಸಿ, ಪಕ್ಷದ ಸದಸ್ಯರು ಹಾಗೂ ಹಿರಿಯ ವಕೀಲರಾದ ಶಂಕರಪ್ಪರವರು ಆರೋಪಿ ಪರ ನಿಂತುಕೊಂಡು ಪಕ್ಷದ ನಿಲುಮೆಗೆ ಹಾಗೂ ಧೋರಣೆಗೆ ವಿರುದ್ಧವಾಗಿ ನಡೆದುಕೊಂಡ ಕಾರಣದಿಂದ ಭಾರತ ಕಮ್ಯುನಿಸ್ಟ್ ಪಕ್ಷ(ಮಾರ್ಕ್ಸವಾದಿ) ಕರ್ನಾಟಕ ರಾಜ್ಯ ಸಮಿತಿಯು, ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಛಾಟಿಸಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ