ಸಚಿವ ಎಚ್.ಕೆ.ಪಾಟೀಲ್ ವಿರುದ್ಧ ಜನಾರ್ದನ ಪೂಜಾರಿ ವಾಗ್ದಾಳಿ
ಶನಿವಾರ, 30 ಏಪ್ರಿಲ್ 2016 (15:33 IST)
ರಾಜ್ಯದಲ್ಲಿ ಬರಗಾಲವಿಲ್ಲ ಬೇಸಿಗೆಯಿದೆ ಎಂದು ಹೇಳಿಕೆ ನೀಡಿದ್ದ ಸಚಿವ ಎಚ್.ಕೆ.ಪಾಟೀಲ್ ವಿರುದ್ಧ ಹಿರಿಯ ಕಾಂಗ್ರೆಸ್ ಮುಖಂಡ ಜನಾರ್ದನ ಪೂಜಾರಿ ವಾಗ್ದಾಳಿ ನಡೆಸಿದ್ದಾರೆ.
ರಾಜ್ಯದಲ್ಲಿ ಜನತೆ ಬರಗಾಲದಿಂದ ತತ್ತರಿಸಿ ಗುಳೆ ಹೋಗುತ್ತಿದ್ದರೂ ಬರಗಾಲವಿಲ್ಲ ಬೇಸಿಗೆಯಿದೆ ಎಂದು ಸಚಿವ ಪಾಟೀಲ್ ಹೇಳಿಕೆ ನೀಡುತ್ತಿರುವುದು ಹಾಸ್ಯಾಸ್ಪದವಾಗಿದೆ ಎಂದು ಕಿಡಕಾರಿದ್ದಾರೆ.
ಸಚಿವ ಎಚ್.ಕೆ.ಪಾಟೀಲ್ ಮನಬಂದಂತೆ ಹೇಳಿಕೆ ನೀಡುವುದು ಸರಿಯಲ್ಲ, ಸಿಎಂ ಬರಪ್ರವಾಸ ಹಮ್ಮಿಕೊಂಡರೂ ಸಚಿವ ಪಾಟೀಲ್ ಅವರ ಜೊತೆ ಯಾಕೆ ಹೋಗಿಲ್ಲ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಜನಾರ್ದನ ಪೂಜಾರಿ ಪ್ರಶ್ನಿಸಿದ್ದಾರೆ.
ಕಾಂಗ್ರೆಸ್ ಪಕ್ಷವನ್ನು ಮುಗಿಸುವಂತಹ ಕೆಲಸ ಮಾಡುವುದು ಬೇಡ ಎಂದು ಸಚಿವ ಪಾಟೀಲ್ಗೆ ಕಿವಿಮಾತು ಹೇಳಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.