ಬಿಜೆಪಿ ಶಾಸಕರ ಬಂಡಾಯಕ್ಕೆ ಹಿರಿಯ ಶಾಸಕರ ಸಾಥ್; ಬಿಎಸ್ ವೈಗೆ ಪರೋಕ್ಷವಾಗಿ ಟಾಂಗ್ ನೀಡಿದ ಶಾಸಕ ತಿಪ್ಪಾರೆಡ್ಡಿ

ಶುಕ್ರವಾರ, 29 ಮೇ 2020 (10:32 IST)
ಬೆಂಗಳೂರು : ಬಿಜೆಪಿ ಶಾಸಕರ ಬಂಡಾಯಕ್ಕೆ ಹಿರಿಯ ಶಾಸಕರ ಸಾಥ್ ನೀಡಿದ್ದು, ಬಿಜೆಪಿ ಶಾಸಕರಲ್ಲಿ ಬೇಸರ, ಭಿನ್ನಮತ ಇರುವುದು ನಿಜ ಎಂದು ಚಿತ್ರದುರ್ಗ ಬಿಜೆಪಿ ಹಿರಿಯ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ  ಕಿಡಿಕಾರಿದ್ದಾರೆ.


ಸಿಎಂ ಯಡಿಯೂರಪ್ಪ ಹಿರಿಯ ಶಾಸಕರ ಕಡೆಗಣನೆ ಮಾಡಿದ್ದಾರೆ. 3 ವರ್ಷ ಅಧಿಕಾರದಲ್ಲಿ ಇರ್ತೇವೆಂದು ಮನಬಂದಂತೆ ಆಡಳಿತ ನಡೆಸುತ್ತಿದ್ದಾರೆ. ಅವರಿಗೆ ಬೇಕಾದವರಿಗೆ ಸಂಪುಟದಲ್ಲಿ ಸ್ಥಾನಮಾನ ನೀಡ್ತಾರೆ. ಸಾಮಾಜಿಕ ನ್ಯಾಯದ ಪರಿಕಲ್ಪನೆ ಇಲ್ಲದೆ ಸ್ಥಾನಮಾನ ನೀಡ್ತಾರೆ. ಶಾಸಕರಿಗೆ ಸ್ಥಾನ ತಪ್ಪಿಸಿ ಎಷ್ಟು ದಿನ ಸರ್ಕಾರ ನಡೆಸಲು ಸಾಧ್ಯ ಎಂದು ಶಾಸಕ ತಿಪ್ಪಾರೆಡ್ಡಿ ಬಿಎಸ್ ವೈಗೆ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ.



 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ