ಹಿರಿಯ ಸಾಹಿತಿ ದೇ.ಜವರೇಗೌಡ ಇನ್ನಿಲ್ಲ

ಮಂಗಳವಾರ, 31 ಮೇ 2016 (10:38 IST)
ಅನಾರೋಗ್ಯದಿಂದ ಬಳಲುತ್ತಿದ್ದ ಶತಾಯುಷಿ ಹಿರಿಯ ಸಾಹಿತಿ ದೇ.ಜವರೇಗೌಡ ಅವರು ಸೋಮವಾರ ಸಂಜೆ ಮೈಸೂರಿನ ಜಯದೇವ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ.
 
ದೇ.ಜವರೇಗೌಡ ಅವರು ದೀರ್ಘಕಾಲದ ಅನಾರೋಗ್ಯದಿಂದ ಬಳಲುತಿದ್ದು ಅವರನ್ನು ಚಿಕೆತ್ಸೆಗಾಗಿ ಮೈಸೂರಿನ ಜಯದೇವ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ನಿಧನ ಹೊಂದಿದ್ದಾರೆ.
 
ದೇ.ಜವರೇಗೌಡ ಅವರು ವಿಶ್ವವಿದ್ಯಾಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದು, ಮೈಸೂರು ವಿಶ್ವವಿದ್ಯಾಲಯದ ಕುಲಪತಿಯಾಗಿ ಅನೇಕ ಶೈಕ್ಷಣಿಕ ಮತ್ತು ಆಡಳಿಕ ಹುದ್ದೆಗಳನ್ನು ನಿರ್ವಹಿಸಿದ್ದರು.
 
ಶತಾಯುಷಿ ಹಿರಿಯ ಸಾಹಿತಿ ದೇ.ಜವರೇಗೌಡ ಅವರು ಸುಮಾರು 50 ಕ್ಕೂ ಹೆಚ್ಚು ಕೃತಿಗಳನ್ನು ರಚಿಸಿದ್ದು, 1998 ರ ಸಾಲಿನಲ್ಲಿ ಪಂಪ ಪ್ರಶಸ್ತಿ, 2001 ರ ಸಾಲಿನಲ್ಲಿ ಪದ್ಮಶ್ರೀ ಪ್ರಶಸ್ತಿ, 2003 ರ ಸಾಲಿನಲ್ಲಿ ಗೊರುರು ಪ್ರಶಸ್ತಿ ಮತ್ತು 2008 ರ ಸಾಲಿನಲ್ಲಿ ಕರ್ನಾಟಕ ರತ್ನ ಪುರಸ್ಕಾರ ಪ್ರಶಸ್ತಿ ಪಡೆದುಕೊಂಡಿದ್ದರು.

ವೆಬ್ದುನಿಯಾವನ್ನು ಓದಿ