ಹಿರಿಯ ಐಎಎಸ್ ಅಧಿಕಾರಿ ಗಂಗಾರಾಮ್ ಬಡೇರಿಯಾ ಅರೆಸ್ಟ್

ಸೋಮವಾರ, 15 ಮೇ 2017 (17:15 IST)
ಹಿರಿಯ ಐಎಎಸ್ ಅಧಿಕಾರಿ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಗಂಗಾರಾಮ್ ಬಡೇರಿಯಾ ಅವರನ್ನು ತನಿಖಾ ತಂಡ ಬಂಧಿಸಿದೆ.
 
ಜಂತಕಲ್ ಮೈನಿಂಗ್ ಕರ್ಮಕಾಂಡದಲ್ಲಿ ಭಾಗಿಯಾಗಿದ್ದಾರೆ ಎನ್ನುವ ಆರೋಪಗಳ ಹಿನ್ನೆಲೆಯಲ್ಲಿ ವಿಶೇಷ ತನಿಖಾ ತಂಡ ಅವರನ್ನು ಬಂಧಿಸಿದೆ.
 
ಕುಮಾರಸ್ವಾಮಿ ಸಿಎಂ ಆಗಿದ್ದಾಗ ನಡೆದಿದ್ದ ಅಕ್ರಮ ಗಣಿಗಾರಿಕೆ ಕರ್ಮಕಾಂಡದಲ್ಲಿ ಬಡೇರಿಯಾ ಭಾಗಿಯಾಗಿದ್ದಾರೆ ಎನ್ನಲಾಗಿತ್ತು.
 
ಲೋಕಾಯುಕ್ತ ವರದಿಯಲ್ಲಿ ಜಂತಕಲ್ ಅಕ್ರಮ ಗಣಿಗಾರಿಕೆಯಲ್ಲಿ ಗಂಗಾರಾಮ್ ಬಡೇರಿಯಾ ಹೆಸರು ಉಲ್ಲೇಖವಾಗಿತ್ತು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ