ಮೂಢನಂಬಿಕೆ ನಿವಾರಿಸಲು ಏಳು ಬಾರಿ ಚಾಮರಾಜನಗರಕ್ಕೆ ಭೇಟಿ: ಸಿಎಂ

ಗುರುವಾರ, 10 ಆಗಸ್ಟ್ 2017 (13:34 IST)
ಚಾಮರಾಜನಗರಕ್ಕೆ ಏಳು ಬಾರಿ ಭೇಟಿ ನೀಡಿದ್ದರೂ ಮುಖ್ಯಮಂತ್ರಿ ಹುದ್ದೆಯಲ್ಲಿ ಮುಂದುವರಿದಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಚಾಮರಾಜನಾಗರಕ್ಕೆ ಭೇಟಿ ನೀಡಿದರೆ ಸಿಎಂ ಸ್ಥಾನ ಹೋಗುತ್ತದೆ ಎನ್ನುವುದು ಮೂಢನಂಬಿಕೆ. ಮೂಢನಂಬಿಕೆ ಹೋಗಲಾಡಿಸಲೆಂದೇ ಏಳು ಬಾರಿ ಭೇಟಿ ನೀಡಿದ್ದೇನೆ ಎಂದು ತಿಳಿಸಿದ್ದಾರೆ.
 
ಲಿಂಗಾಯುತ ಪ್ರತ್ಯೇಕ ಧರ್ಮದ ಬಗ್ಗೆ ನನ್ನ ನಿಲುವು ಏನೂ ಇಲ್ಲ. ಸನ್ಮಾನ ಮಾಡುವ ಸಂದರ್ಭದಲ್ಲಿ ಲಿಂಗಾಯುತ ಮುಖಂಡರು ಪ್ರತ್ಯೇಕ ಧರ್ಮದ ಕುರಿತು ಪ್ರಸ್ತಾಪಿಸಿದ್ದಾರೆ. ವೀರಶೈವ ಮುಖಂಡರು ಭೇಟಿ ಮಾಡಿ ಮಾಹಿತಿ ನೀಡಿದ್ದಾರೆ ಎಂದರು.
 
ಲಿಂಗಾಯುತ ಮತ್ತು ವೀರಶೈವ ಮಹಾಸಭೆಯವರು ಒಂದಾಗಿ ಬಂದಲ್ಲಿ ಲಿಂಗಾಯುತ ಪ್ರತ್ಯೇಕ ಧರ್ಮ ಕುರಿತಂತೆ ಕೇಂದ್ರಕ್ಕೆ ಶಿಫಾರಸು ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.  
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ