ಮನೆ ಕೆಲಸದಾಕೆ ಮೇಲೆ ಲೈಂಗಿಕ ಕಿರುಕುಳ: ಎಚ್ ಡಿ ರೇವಣ್ಣಗೆ ಬಂಧನದ ಭೀತಿ
ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಪ್ರಜ್ವಲ್ ರೇವಣ್ಣರ ಪೆನ್ಡ್ರೈವ್ ಪ್ರಕರಣದಲ್ಲಿ ಯಾರನ್ನೂ ರಕ್ಷಣೆ ಮಾಡುವುದಿಲ್ಲ. ಈಗಾಗಲೇ ಲುಕ್ಔಟ್ ನೋಟಿಸ್ ನೀಡಲಾಗಿದೆ, ಪ್ರಜ್ವಲ್ ಪರ ವಕೀಲರು ಸಮಯ ಕೇಳಿದ್ದಾರೆ. ಇಂಥಾ ಪ್ರಕರಣಗಳಲ್ಲಿ ಕಾಲಾವಕಾಶ ಕೊಡಲು ಆಗೋದಿಲ್ಲ, ಹೀಗಾಗಿ ಅರೆಸ್ಟ್ ಮಾಡಲು ಎಸ್ಐಟಿ ಎಲ್ಲ ಕ್ರಮ ಕೈಗೊಳ್ಳಲಿದೆ ಎಂದರು.