ಕಿರುಕುಳ ನೀಡಿ ಪೊಲೀಸ್ ಬಂಧನಕ್ಕೆ ಒಳಗಾಗಿ ಹೊರ ಬಂದಿದ್ದ ಆರೋಪಿನ್ನು ತುಕಾರಾಂ ಮಜ್ಜಿಗೆ ಎನ್ನಲಾಗಿದ್ದು, ಹೆಸ್ಕಾಂನ ಹಿರಿಯ ಅಧಿಕಾರಿ ಎನ್ನಲಾಗಿದೆ. ಕಾರ್ಯ ನಿರ್ವಹಿಸುತ್ತಿದ್ದ ವೇಳೆಯಲ್ಲಿ ಮಜ್ಜಿಗೆ, ದೈಹಿಕವಾಗಿ ಹಾಗೂ ಮಾನಸಿಕವಾಗಿ ಲೈಂಗಿಕ ಕಿರುಕುಳ ನೀಡುತ್ತಿದ್ದ ಎಂದು ಆರೋಪಿಸಿರುವ ಸಂತ್ರಸ್ತೆ, ಆರೋಪಿ ವಿರುದ್ಧ ಇಲ್ಲಿನ ಸ್ಥಳೀಯ ಪೊಲೀಸ್ ಠಾಣೆ ಮಾಳ ಮಾರುತಿ ಎಂಬಲ್ಲಿ ದೂರು ದಾಖಲಿಸಿದ್ದರು. ಆದರೆ ಆರೋಪಿಯನ್ನು ಬಂಧಿಸಿದ್ದ ಪೊಲೀಸರು ಯಾವುದೇ ಕ್ರಮ ಕೈಗೊಳ್ಳದೆ ಹೊರ ಬಿಟ್ಟಿದ್ದರು. ಇದರಿಂದ ಮನನೊಂದಿದ್ದ ಮಹಿಳೆ ಇಂದು ವಿಷ ಸೇವಿಸುವ ಮೂಲಕ ಆತ್ಮಹತ್ಯೆಗೆ ಯತ್ನಿಸಿದ್ದಾಳೆ ಎಂದು ತಿಳಿದು ಬಂದಿದೆ.