ನಾವು ನುಡಿದಂತೆ ನಡೆಯುವವರು ಎಂಬುದಕ್ಕೆ ಶಕ್ತಿ ಯೋಜನೆಯೇ ಸಾಕ್ಷಿ: ದಿನೇಶ್ ಗುಂಡೂರಾವ್

ಸೋಮವಾರ, 12 ಜೂನ್ 2023 (13:47 IST)
ಬೆಂಗಳೂರು : ಮಹಿಳೆಯರ ಉಚಿತ ಬಸ್ ಪ್ರಯಾಣಕ್ಕೆ ಇಂದು ಚಾಲನೆ ಸಿಗಲಿದ್ದು, ನಾವು ನುಡಿದಂತೆ ನಡೆಯುವವರು ಎಂಬುದಕ್ಕೆ 5 ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ‘ಶಕ್ತಿ ಯೋಜನೆ’ಯೇ ಸಾಕ್ಷಿ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ನಾವು ಅಧಿಕಾರಕ್ಕೆ ಬಂದ 1ತಿಂಗಳ ಒಳಗೇ ಈ ಯೋಜನೆ ಅನುಷ್ಟಾನವಾಗುತ್ತಿರುವುದು ಸಾರ್ಥಕತೆ ಮೂಡಿಸಿದೆ. ನಾನು ಉಸ್ತುವಾರಿಯಾಗಿರುವ ದ.ಕನ್ನಡದ ಬಿಜೈನ KSRTC ನಿಗಮದಲ್ಲಿ ನಾನು ಈ ಯೋಜನೆಗೆ ಇಂದು ಚಾಲನೆ ನೀಡಲಿದ್ದೇನೆ.

ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಅವರು ತಮ್ಮ ವಿರೋಧಿಗಳಿಗೆ ಹಾಗೂ ಬಿಜೆಪಿ ನಾಯಕರ ಹೇಳಿಕೆಗಳಿಗೆ ಟಾಂಗ್ ನೀಡಿದರು. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ