ಪ್ರತ್ಯೇಕ ಧರ್ಮಕ್ಕೆ ಶಾಮನೂರು ಆಕ್ಷೇಪ ಸರಿಯಲ್ಲ- ಸಚಿವ

ಶುಕ್ರವಾರ, 2 ಫೆಬ್ರವರಿ 2018 (09:47 IST)

ಪ್ರತ್ಯೇಕ ಲಿಂಗಾಯತ ಧರ್ಮದ ತಜ್ಞರ ಸಮಿತಿಗೆ ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ಆಕ್ಷೇಪಿಸುವುದು ಸರಿಯಲ್ಲ ಎಂದು ಸಚಿವ ವಿನಯ ಕುಲಕರ್ಣಿ ಹೇಳಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ತಜ್ಞರ ವರದಿಯನ್ನು ಅಲ್ಲಗೆಳೆಯುವ ಪ್ರಶ್ನೆಯೇ ಇಲ್ಲ. ಎಲ್ಲರೂ ಒಪ್ಪಿಕೊಳ್ಳಲೇಬೇಕು ಎಂದಿದ್ದಾರೆ.

ವೀರಶೈವ ಧರ್ಮದ ಪರವಾಗಿರುವ ಶಾಮನೂರು ಶಿವಶಂಕರಪ್ಪ ಅವರು ಮೊದಲಿನಿಂದಲೂ ವಿರುದ್ಧವೇ ಇದ್ದಾರೆ. ಅವರ ಕ್ರಮ ಖಂಡನೀಯ ಎಂದು ತಿಳಿಸಿದ್ದಾರೆ.

ಮರಳು ವ್ಯವಹಾರದಲ್ಲಿ ಯಾವುದೇ ಅವ್ಯವಹಾರ ನಡೆದಿಲ್ಲ. ಜಗದೀಶ ಶೆಟ್ಟರ್ ಅವರಿಗೆ ಸರಿಯಾದ ಮಾಹಿತಿಯಿಲ್ಲ ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ