ಲೋಕಚುನಾವಣೆಗೆ ಸ್ಪರ್ಧಿಸುವೆ ಎಂದ ಶಾಮನೂರು!

ಸೋಮವಾರ, 11 ಮಾರ್ಚ್ 2019 (15:11 IST)
ಲೋಕಸಭಾ ಚುನಾವಣೆ ದಿನಾಂಕ ನಿಗದಿ ಹಿನ್ನಲೆ ದಾವಣಗೆರೆಯಲ್ಲಿ ಶಾಮನೂರು ಶಿವಶಂಕರಪ್ಪ ಪ್ರತಿಕ್ರಿಯೆ ನೀಡಿದ್ದು, ತಮ್ಮ ಮನದಾಳದ ಆಸೆಯನ್ನು ಹೊರಹಾಕಿದ್ದಾರೆ.

ಎರಡು ಹಂತದಲ್ಲಿ ಚುನಾವಣೆ ನಡೆಸಲು ನಿಗದಿಯಾಗಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಹೆಚ್ಚು ಸ್ಥಾನ ಗೆಲ್ಲುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ದಾವಣಗೆರೆಯಲ್ಲಿ ಚುನಾವಣೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಪಕ್ಷದ ಅಭ್ಯರ್ಥಿಯಾಗಿ ಯಾರೇ ನಿಂತರು ಒಗ್ಗಟ್ಟಿನಿಂದ ಕೆಲಸ ಮಾಡುತ್ತೇವೆ. ಲೋಕಸಭಾ ಚುನಾವಣೆಗೆ ನಿಲ್ಲುವ ಆಸೆ ಇದೆ ಎಂದು ಶಾಮನೂರು ಶಿವಶಂಕರಪ್ಪ ಹೇಳಿದರು. ಆದರೆ ಹೈಕಮಾಂಡ್ ವಯಸ್ಸಾದವರಿಗೆ ಕೊಡಲ್ಲ ಎಂದು ಹೇಳಿದೆ. ನಾನು ಕೂಡ ಒಮ್ಮೆ ಸಂಸದನಾಗಿದ್ದೇ. ಹೈಕಮಾಂಡ್ ನಿರ್ಧಾರವನ್ನು ಪಾಲಿಸುತ್ತೇವೆ ಎಂದು ತಿಳಿಸಿದ್ದಾರೆ.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ