ಡಿಸಿ ಕಚೇರಿಗೆ ಜನರೇ ಬರಬಾರದು ಎಂದ ಜಿಲ್ಲಾಧಿಕಾರಿ
ಜನರು ಡಿಸಿ ಕಚೇರಿಗೆ ಅನಗತ್ಯವಾಗಿ ಬರಲೇಬಾರದು ಎಂದು ಜಿಲ್ಲಾಧಿಕಾರಿ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಆದ್ದರಿಂದ ಸಾರ್ವಜನಿಕರು ಉಡುಪಿ ಜಿಲ್ಲಾಧಿಕಾರಿ ಕಚೇರಿಯ ಮುಂಭಾಗದಲ್ಲಿ ಅನಾವಶ್ಯಕವಾಗಿ ಅನುಮತಿ ಪಡೆಯಲು ಏಪ್ರಿಲ್ 14 ರ ವರೆಗೆ ಬರುವುದನ್ನು ನಿಷೇಧಿಸಲಾಗಿದೆ. ತುರ್ತು ವೈದ್ಯಕೀಯ ಚಿಕಿತ್ಸೆ ನೆಲೆಯಲ್ಲಿ, ಬೇರೆ ಜಿಲ್ಲೆಯ ಆಸ್ಪತ್ರೆಗಳಿಗೆ ತೆರಳಲು, ವೈದ್ಯಕೀಯ ದೃಢಿಕೃತಪತ್ರದೊಂದಿಗೆ ಸಾರ್ವಜನಿಕರಿಗೆ ಅನುಮತಿ ಪಡೆಯಲು ಮಾತ್ರ ಅವಕಾಶ ನೀಡಲಾಗಿದೆ. ಇದರ ಹೊರತು ಬೇರೆ ಯಾವುದೇ ಅನುಮತಿಗಾಗಿ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ.