ಕಾಂಗ್ರೆಸ್‌ನವರಿಂದ ದೇಶದ್ರೋಹ– ಶೆಟ್ಟರ್‌ ಆರೋಪ

ಬುಧವಾರ, 31 ಜನವರಿ 2018 (19:01 IST)
ಭಾರತದ ನಾಗರಿಕತ್ವ ಇಲ್ಲದ ಅಕ್ರಮ ವಲಸಿಗರು ಓಟ್ ಹಾಕುತ್ತಾರೆ ಎಂಬ ಕಾರಣಕ್ಕೆ ಕಾಂಗ್ರೆಸ್‌ನವರು ಆಧಾರ್ ಕಾರ್ಡ್‌ ಮಾಡಿಸಿಕೊಟ್ಟು ದೇಶದ್ರೋಹ ಮಾಡುತ್ತಿದ್ದಾರೆ ಎಂದು ವಿಧಾನಸೌಧ ವಿರೋಧ ಪಕ್ಷದ ನಾಯಕ ಜಗದೀಶ ಶೆಟ್ಟರ್ ಗಂಭೀರ ಆರೋಪ ಮಾಡಿದ್ದಾರೆ.
 
ಬೆಂಗಳೂರಿನಲ್ಲಿ ಬಾಂಗ್ಲಾ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚಾಗಿದೆ. ನುಸುಳುಕೋರರಿಗೆ ಮತದಾರ ಚೀಟಿ ಮಾಡಿಸಿಕೊಟ್ಟಿದ್ದಾರೆ. ಬೆಳ್ಳಂದೂರು ಪೊಲೀಸ್ ಠಾಣೆಯಲ್ಲಿ ಅಕ್ರಮವಾಗಿ ಆಧಾರ್ ಮಾಡಿಸಿದ ಏಳು ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಕಾಂಗ್ರೆಸ್‌ನವರಿಗೆ ದೇಶದ ಬಗ್ಗೆ ಕಿಂಚಿತ್ತೂ ಕಾಳಜಿಯಿಲ್ಲ ಎಂದಿದ್ದಾರೆ.
 
ರಾಜ್ಯದಲ್ಲಿ ಅಕ್ರಮ ಮರಳು ಗಣಿಗಾರಿಕೆ ನಿರಂತರವಾಗಿ ನಡೆಯುತ್ತಿದೆ. ಮರಳು ದಂಧೆಯಲ್ಲಿ ಕಾಂಗ್ರೆಸ್‌ ಶಾಸಕರು ಹಾಗೂ ಸಚಿವರು ಭಾಗಿಯಾಗಿದ್ದಾರೆ. ಎಂಎಸ್ಎಲ್ ಟೆಂಡರ್ ಪಾರದರ್ಶಕವಾಗಿಲ್ಲ ಅಧಿವೇಶನದಲ್ಲಿ ಹೋರಾಟ ನಡೆಸಲಾಗುತ್ತದೆ ಎಂದು ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ