ಸುಪ್ರೀಂಕೋರ್ಟ್ ಮೆಟ್ಟಿಲೇರಿದ ಶಿವಸೇನೆ, ಎನ್ ಸಿಪಿ ಹಾಗೂ ಕಾಂಗ್ರೆಸ್. ಕಾರಣವೇನು ಗೊತ್ತಾ?

ಭಾನುವಾರ, 24 ನವೆಂಬರ್ 2019 (08:40 IST)
ಮುಂಬೈ : ದೇವೇಂದ್ರ ಫಡ್ನವೀಸ್  ಅವರು ಪ್ರಮಾಣ ಸ್ವೀಕರಿಸಿದ ಬೆನ್ನಲೇ ಶಿವಸೇನೆ, ಎನ್ ಸಿಪಿ ಹಾಗೂ ಕಾಂಗ್ರೆಸ್ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ ಎನ್ನಲಾಗಿದೆ.


ಹೌದು. ದೇವೇಂದ್ರ ಫಡ್ನವೀಸ್  ಅವರಿಗೆ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಲು ಅವಕಾಶ ನೀಡಿದ ರಾಜ್ಯಪಾಲರ ಕ್ರಮ ದುರುದ್ದೇಶದಿಂದ ಕೂಡಿದೆ ಎಂದು ಆರೋಪಿಸಿ ಅದನ್ನು ಖಂಡಿಸಿ ಶಿವಸೇನೆ, ಎನ್ ಸಿಪಿ ಹಾಗೂ ಕಾಂಗ್ರೆಸ್ ಸುಪ್ರೀಂಕೋರ್ಟ್ ನ ಮೊರೆ ಹೋಗಿದೆ.

 

ಆದ್ದರಿಂದ ಇಂದು ಈ ಅರ್ಜಿಯ ತುರ್ತು ವಿಚಾರಣೆ ನಡೆಸಲು ಸುಪ್ರೀಂಕೋರ್ಟ್ ಒಪ್ಪಿಗೆ ನೀಡಿದ್ದು, ಬೆಳಿಗ್ಗೆ 11.30ಕ್ಕೆ ಸಮಯ ನಿಗದಿ ಮಾಡಿದೆ ಎನ್ನಲಾಗಿದೆ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ