ಅಪ್ಪು ನೆನಪಿಗೆ ಸೈಕಲ್ ಜಾಥಾ ಸಾಥ್ ಕೊಟ್ಟ ಶಿವಣ್ಣ

ಭಾನುವಾರ, 21 ನವೆಂಬರ್ 2021 (14:45 IST)
ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿಮಾನಿಗಳ ಪಾಲಿನ ಅಪ್ಪು ಅಗಲಿ ಇಂದು ಭಾನುವಾರಕ್ಕೆ 23 ದಿನ. ಪುನೀತ್ ರಾಜ್ ಕುಮಾರ್ ಅವರಿಗೆ ಸೈಕಲ್ ಪ್ರಯಾಣ ಎಂದರೆ ಅಚ್ಚುಮೆಚ್ಚು. ಬಿಡುವಿದ್ದಾಗ ಕಿಲೋಮೀಟರ್ ಗಟ್ಟಲೆ ಒಬ್ಬನೇ ಇಲ್ಲವೇ ಸ್ನೇಹಿತರ ಜೊತೆ ಸೈಕಲ್ ನಲ್ಲಿ ಸವಾರಿ ಹೋಗುತ್ತಿದ್ದರಂತೆ.ಇಂದು ರಾಜ್ಯ ಮೀಸಲು ಪೊಲೀಸ್ ಇಲಾಖೆ ಮತ್ತು ಬೆಂಗಳೂರು ಸಂಚಾರ ಪೊಲೀಸ್ ಇಲಾಖೆ ಪುನೀತ್ ರಾಜ್ ಕುಮಾರ್ ಅವರ ಸ್ಮರಣಾರ್ಥ 66ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಸೈಕಲ್ ಜಾಥಾ ಹಮ್ಮಿಕೊಂಡಿದ್ದವು. ಅದಕ್ಕೆ ನಟ ಶಿವರಾಜ್ ಕುಮಾರ್ ಚಾಲನೆ ನೀಡಿದರು. ನಗರದ ಕಂಠೀರವ ಸ್ಟೇಡಿಯಂನಿಂದ 50 ಕಿಲೋ ಮೀಟರ್ ದೂರ ಸೈಕಲ್ ಜಾಥಾ ಸಾಗಿದೆ. ಜಾಥಾದಲ್ಲಿ ಎಡಿಜಿಪಿ ಅಲೋಕ್ ಕುಮಾರ್, ಸಂಚಾರಿ ಜಂಟಿ ಪೊಲೀಸ್ ಆಯುಕ್ತ ರವಿಕಾಂತೇಗೌಡ ಹಾಗೂ ಇತರ ಪೊಲೀಸರು ಭಾಗಿಯಾಗಿದ್ದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ