ಪ್ರಧಾನಮಂತ್ರಿ ನರೇಂದ್ರ ಮೋದಿ ಸಚಿವ ಸಂಪುಟ ಪುನಾರಚನೆಗೊಳಿಸಲಿದ್ದು, ಸಂಸದೆ ಶೋಭಾ ಕರಂದ್ಲಾಜೆಗೆ ಕೇಂದ್ರ ಸಚಿವ ಸ್ಥಾನ ನೀಡಲು ಸಿದ್ದತೆ ನಡೆದಿದೆ ಎಂದು ಮೂಲಗಳು ತಿಳಿಸಿವೆ.
ಕೇಂದ್ರ ಕಾನೂನು ಖಾತೆ ಸಚಿವ ಡಿ.ವಿ.ಸದಾನಂದಗೌಡ ಅವರಿಗೆ ಕೊಕ್ ನೀಡಿ ಅವರ ಸ್ಥಾನಕ್ಕೆ ಕರಂದ್ಲಾಜೆಯವರನ್ನು ನೇಮಕ ಮಾಡುವ ಸಾಧ್ಯತೆಗಳಿವೆ ಎಂದು ಬಿಜೆಪಿ ಪಕ್ಷದ ಅನಾಮಧೇಯ ನಾಯಕರು ತಿಳಿಸಿದ್ದಾರೆ.
ರಾಜ್ಯದವರಾದ ಸಚಿವ ಅನಂತ್ ಕುಮಾರ್ ಮತ್ತು ಸಿದ್ದೇಶ್ವರ್ ಅವರ ಸ್ಥಾನಕ್ಕೆ ಯಾವುದೇ ಧಕ್ಕೆ ಇಲ್ಲವೆಂದು ಹೇಳಲಾಗುತ್ತಿದ್ದು, ಸದಾನಂದಗೌಡರ ಖುರ್ಚಿಗೆ ಸಂಚಕಾರ ಬರುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.
ಉತ್ತರಪ್ರದೇಶದಲ್ಲಿ ಮುಂದಿನ ವರ್ಷ ವಿಧಾನಸಭೆಗೆ ಚುನಾವಣೆಗಳು ನಡೆಯಲಿರುವ ಹಿನ್ನೆಲೆಯಲ್ಲಿ ಹೆಚ್ಚಿನ ಸಚಿವ ಸ್ಥಾನಗಳು ಉತ್ತರಪ್ರದೇಶದ ಸಂಸದರಿಗೆ ಲಭ್ಯವಾಗಲಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.