ತಮ್ಮ ವಿರುದ್ಧ ಕೇಸ್ ದಾಖಲಿಸಿದ ಕೇರಳ ಸರ್ಕಾರಕ್ಕೆ ತಿರುಗೇಟು ನೀಡಿದ ಸಂಸದೆ ಶೋಭಾ ಕರಂದ್ಲಾಜೆ

ಶುಕ್ರವಾರ, 24 ಜನವರಿ 2020 (11:46 IST)
ಬೆಂಗಳೂರು : ಕೇರಳ ಪೊಲೀಸರು ತಮ್ಮ ವಿರುದ್ಧ ಕೇಸ್ ದಾಖಲಿಸಿದ್ದಕ್ಕೆ ಸಂಸದೆ ಶೋಭಾ ಕರಂದ್ಲಾಜೆ ಟ್ವೀಟ್ ಮೂಲಕ ತಿರುಗೇಟು ನೀಡಿದ್ದಾರೆ.


ಕೇಸ್ ಸಂಬಂಧ ಟ್ವೀಟ್ಮಾಡಿರುವ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ, ಚೇರುಕ್ಕುನ್ನುನಲ್ಲಿ ದಲಿತರಿಗೆ ಆದ ಅನ್ಯಾಯ ಸರಿಪಡಿಸಿಲ್ಲ. ಅದರ ಬದಲಿಗೆ ನನ್ನ ವಿರುದ್ಧವೇ ಪ್ರಕರಣ ದಾಖಲಿಸಿದ್ದಾರೆ. ಪೂರ್ವಗ್ರಹ ಪೀಡಿತ ಕೇರಳ ಸರ್ಕಾರದ ಒತ್ತಡ ತಂತ್ರ. ಇದರ ವಿರುದ್ಧ ಇಡೀ ಸಮಾಜ ಒಗ್ಗಟ್ಟಾಗಲು ಸಕಲವಾಗಿದೆ ಎಂದು ಕಿಡಿಕಾರಿದ್ದಾರೆ.


ಪೌರತ್ವ ತಿದ್ದುಪಡಿ ಕಾಯ್ದೆ ಬೆಂಬಲಿಸಿದವರಿಗೆ ಉದ್ಯಮ, ಮೂಲ ಸೌಕರ್ಯ, ಉದ್ಯೋಗ ಎಲ್ಲವನ್ನೂ ಬಹಿಷ್ಕರಿಸಿದ್ದಾರೆ. ಕೇರಳದಲ್ಲಿ ನಡೆಯುತ್ತಿರುವ ಬೆಳವಣಿಗೆ ಬಗ್ಗೆ ಕೇರಳ ಸಿಪಿಎಂ ಸರ್ಕಾರ ಕುರುಡಾಗಿದೆ. ಆದರೆ ಸತ್ಯ ಮಾತನಾಡಿದ್ದಕ್ಕೆ ನನ್ನ ವಿರುದ್ಧ ಕೇಸ್ ದಾಖಲಿಸಿದ್ದಾರೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ