ಕೆಂಪಯ್ಯನ ಮೂಲಕವೇ ಎಲ್ಲಾ ಮಾಡ್ಸಿ: ಕರಂದ್ಲಾಜೆ ಲೇವಡಿ

ಮಂಗಳವಾರ, 11 ಜುಲೈ 2017 (15:06 IST)
ಮಂಗಳೂರಿನ ಗಲಭೆ ನಿಯಂತ್ರಣಕ್ಕೆ ಉಸ್ತುವಾರಿಯಾಗಿ ಕೆಂಪಯ್ಯನವರನ್ನು ವಹಿಸಲಾಗುವುದು ಎನ್ನುವ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿರುವ ಸಂಸದೆ ಶೋಭಾ ಕರಂದ್ಲಾಜೆ, ಕೆಂಪಯ್ಯನವರ ಮೂಲಕವೇ ಎಲ್ಲಾ ಮಾಡಿಸಿ ಎಂದು ವಾಗ್ದಾಳಿ ನಡೆಸಿದ್ದಾರೆ.
 
ಗೃಹ ಸಚಿವರ ಸಲಹೆಗಾರರಾಗಿರುವ ಕೆಂಪಯ್ಯ ನನಗೆ ಹುದ್ದೆಯಲ್ಲಿ ಮುಂದುವರಿಯಲು ಸಾಧ್ಯವಿಲ್ಲ ಎಂದು ಹೇಳಿ ಉದ್ಯೋಗದಿಂದ ನಿರ್ಗಮಿಸಿದ್ದಾರೆ. ಅಂತಹ ವ್ಯಕ್ತಿಗೆ ಮಂಗಳೂರಿನ ಉಸ್ತುವಾರಿಯಾಗಿ ನೇಮಿಸಲಾಗಿದೆ ಎಂದು ಲೇವಡಿ ಮಾಡಿದ್ದಾರೆ.
 
ಮಂಗಳೂರು ಹಿಂಸಾಚಾರಕ್ಕೆ ಪ್ರಚೋದಿಸಿದ ಆರೋಪ ಎದುರಿಸುತ್ತಿರುವ ಸಚಿವರಾದ ರಮಾನಾಥ್ ರೈ ಮತ್ತು ಯು.ಟಿ.ಖಾದರ್ ರಾಜೀನಾಮೆ ಪಡೆಯಬೇಕು ಎಂದು ಒತ್ತಾಯಿಸಿದ್ದಾರೆ.
 
ದಕ್ಷಿಣ ಕನ್ನಡದಲ್ಲಿ ನಡೆದ ಅಹಿತಕರ ಘಟನೆಗಳ ಬಗ್ಗೆ ವಿಡಿಯೋಗಳಲ್ಲಿ ದೃಶ್ಯಗಳು ದಾಖಲಾಗಿವೆ. ವಿಡಿಯೋಗಳನ್ನು ನೋಡಿ ಅಪರಾಧಿಗಳ ವಿರುದ್ಧ ಸರಕಾರ ಕ್ರಮಕೈಗೊಳ್ಳಲಿ ಎಂದು ಉಡುಪಿ ಸಂಸದೆ ಶೋಭಾ ಕರಂದ್ಲಾಜೆ ಒತ್ತಾಯಿಸಿದ್ದಾರೆ.   

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ