ಗಜಪಡೆ ಮಾವುತರು ಹಾಗೂ ಕಾವಾಡಿಗಳ ಕುಟುಂಬಕ್ಕೆ ಉಪಹಾರ ವ್ಯವಸ್ಥೆ ಮಾಡಿದ ಶೋಭಾ ಕರಂದ್ಲಾಜೆ

ಸೋಮವಾರ, 7 ಅಕ್ಟೋಬರ್ 2019 (09:55 IST)
ಮೈಸೂರು : ಪ್ರತಿವರ್ಷದಂತೆ ಈ ವರ್ಷವೂ ಕೂಡ ಸಂಸದೆ ಶೋಭಾ ಕರಂದ್ಲಾಜೆ ಅವರು ಗಜಪಡೆ ಮಾವುತರು ಹಾಗೂ ಕಾವಾಡಿಗಳ ಕುಟುಂಬಕ್ಕೆ ಲಘು ಉಪಹಾರ ವ್ಯವಸ್ಥೆ ಮಾಡಿದ್ದಾರೆ.




ಇಂದು ಮಾವುತರು, ಕಾವಾಡಿಗಳ ಕುಟುಂಬಕ್ಕೆ ದೋಸೆ, ಪೊಂಗಲ್, ಇಡ್ಲಿ, ವಡೆ, ಹಾಲುಬಾಯಿ, ಖಾರಾಬಾತ್ ಗಳನ್ನು ಉಪಹಾರವಾಗಿ ನೀಡಿದ್ದಾರೆ. ಅಲ್ಲದೇ  ಖುದ್ದು ಶೋಭಾ ಕರಂದ್ಲಾಜೆ ಅವರೇ ಉಪಹಾರ ಬಡಿಸಿದ್ದಾರೆ.


40 ಕುಟುಂಬಗಳಿಗೆ ಉಪಹಾರ ವ್ಯವಸ್ಥೆ ಮಾಡಲಾಗಿತ್ತು. ಶೋಭಾ ಕರಂದ್ಲಾಜೆಗೆ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಸಾಥ್ ನೀಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ