ತಿವಾರಿ ಸಾವು: ಯುಪಿ ಸಿಎಂ ಯೋಗಿ ಆದಿತ್ಯನಾಥ್‌ಗೆ ಶೋಭಾ ಪತ್ರ

ಬುಧವಾರ, 17 ಮೇ 2017 (15:53 IST)
ಆಹಾರ ಇಲಾಖೆಯ ಆಯುಕ್ತರಾಗಿದ್ದ ಹಿರಿಯ ಐಎಎಸ್ ಅಧಿಕಾರಿ ಅನುರಾಗ್ ತಿವಾರಿ ಸಾವಿನ ಬಗ್ಗೆ ತನಿಖೆ ನಡೆಸಿ ಎಂದು ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್‌ಗೆ ಪತ್ರ ಬರೆದಿದ್ದಾರೆ.
 
 ಹಿರಿಯ ಐಎಎಸ್ ಅಧಿಕಾರಿ ಅನುರಾಗ್ ತಿವಾರಿ ದಕ್ಷ ಅಧಿಕಾರಿಯಾಗಿದ್ದು, ಭ್ರಷ್ಟ ಅಧಿಕಾರಿಗಳಿಗೆ ಸಿಂಹ ಸ್ವಪ್ನರಾಗಿದ್ದರು. ಅವರ ಸಾವಿನ ಹಿಂದಿರುವ ಸತ್ಯ ಸಂಗತಿ ಬಯಲಿಗೆ ಬರುವುದು ಅಗತ್ಯವಾಗಿದೆ ಎಂದು ಮನವಿ ಮಾಡಿದ್ದಾರೆ
 
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಅನುರಾಗ್ ತಿವಾರಿ ಸಾವಿನ ಬಗ್ಗೆ ಸೂಕ್ತ ತನಿಖೆ ನಡೆಸಿ ಹಿಂದಿನ ಷಡ್ಯಂತ್ರ ರಾಜ್ಯದ ಜನತೆಗೆ ಗೊತ್ತಾಗಬೇಕಿದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.
 
ಕರ್ನಾಟಕ ಕೇಡರ್‌ನ ಎಐಎಸ್ ಅಧಿಕಾರಿಯಾಗಿದ್ದ ಅನುರಾಗ್ ತಿವಾರಿಯವರ ಮೃತದೇಹ ಲಕ್ನೋದ ಹಜರತ್‌ಗಂಜ್‌ನಲ್ಲಿರುವ ಗೆಸ್ಟ್‌ಹೌಸ್ ಬಳಿ ಪತ್ತೆಯಾಗಿದೆ. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ