ರಾಜ್ಯಕ್ಕೆ ಮಹಾದಾಯಿ ನೀರು ತಂದೇ ತರುತ್ತೇವೆ ಎಂದ ಶೋಭಾ

ಬುಧವಾರ, 27 ಡಿಸೆಂಬರ್ 2017 (15:36 IST)
ರಾಜ್ಯಕ್ಕೆ ಮಹಾದಾಯಿ ನೀರನ್ನು ತಂದೇ ತರುತ್ತೇವೆ. ವಿವಾದ ಬಗೆಹರಿಸಲು ನಡೆಸುತ್ತಿರುವ ಪ್ರಯತ್ನವನ್ನು ಕೈ ಬಿಡುವುದಿಲ್ಲ ಎಂದು ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಸ್ಪಷ್ಟಪಡಿಸಿದ್ದಾರೆ.
 
ಕೆಪಿಸಿಸಿ ಕಚೇರಿಯ ಬಳಿ ನಡೆಸಿದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಗೋವಾ ಮುಖ್ಯಮಂತ್ರಿಯೊಂದಿಗೆ ವಿವಾದ ಬಗೆಹರಿಸಲು ಪತ್ರದ ಮೂಲಕ ಪ್ರಯತ್ನಿಸಿದ್ದಾರೆ. ಯಡಿಯೂರಪ್ಪ ಅವರಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಗೋವಾ ಕಾಂಗ್ರೆಸ್ಸಿಗರೊಂದಿಗೆ ಮಾತುಕತೆ ನಡೆಸಿ ವಿವಾದ ಬಗೆಹರಿಸಲು ಪ್ರಯತ್ನಿಸಬಹುದು. ಆದರೆ, ಅವರು ಅದನ್ನು ಮಾಡುತ್ತಿಲ್ಲ ಎಂದು ಆರೋಪಿಸಿದ್ದಾರೆ.
 
ಇದೇ ವೇಳೆ ಪೊಲೀಸ ಇಲಾಖೆಯ ವಿರುದ್ಧ ಕೆಂಡ ಕಾರಿದ ಅವರು, ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದರೂ ಪೊಲೀಸರು ತಡೆಯುವ ಮೂಲಕ ಕಾಂಗ್ರೆಸ್ ಏಜೆಂಟರಂತೆ ವರ್ತಿಸುತ್ತಿದ್ದಾರೆ ಎಂದು ದೂರಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ