ಶಾಸಕ ಶ್ರೀನಿವಾಸಗೌಡ ಪುತ್ರನ ಕಾರು ಅಪಘಾತ

ಶುಕ್ರವಾರ, 2 ಜುಲೈ 2021 (17:45 IST)
ಶಾಸಕ ಶ್ರೀನಿವಾಸ ಗೌಡ ಪುತ್ರ ಪ್ರಯಾಣಿಸುತ್ತಿದ್ದ ಕಾರು ಬೆಂಗಳೂರು ರಾಜ್ಯ ಹೆದ್ದಾರಿಯಲ್ಲಿ ಅಪಘಾತಕ್ಕೀಡಾಗಿದ್ದು, ಗಂಭೀರವಾಗಿ ಗಾಯಗೊಂಡ ಪುತ್ರನನ್ನು ಸ್ವತಃ ಶ್ರೀನಿವಾಸ ಗೌಡ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಚಿಕ್ಕಬಳ್ಳಾಪುರದ ಚಿಂತಾಮಣಿ ಬಳಿ ಗುರುವಾರ ಮಧ್ಯಾಹ್ನ ಈ ಘಟನೆ ಸಂಭವಿಸಿದ್ದು, ಶ್ರೀನಿವಾಸಗೌಡ ಪುತ್ರ  ಮಂಜುನಾಥ್ ಗಂಭೀರವಾಗಿ ಗಾಯಗೊಂಡಿದ್ದಾರೆ.
ಚಿಂತಾಮಣಿಯಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದಾಗ ಬೀಚಗೊಂಡಹಳ್ಳಿ ಟೋಲ್ ಅಗ್ರಹಾರ ನಡುವೆ ಅಪಘಾತ ಸಂಭವಿಸಿದ್ದು, ಗಾಯಗೊಂಡಿರುವ ಮಂಜುನಾಥ್ ಅವರನ್ನು ಶಾಸಕರು ತಮ್ಮ ಕಾರಿನಲ್ಲಿ ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ