ಸಿದ್ದಗಂಗಾ ಶ್ರೀಗಳ ಅಗಲಿಕೆಗೆ ಸಂತಾಪ

ಸೋಮವಾರ, 21 ಜನವರಿ 2019 (17:48 IST)
ನಡೆದಾಡುವ ದೇವರು ಎಂದೇ ಪ್ರಸಿದ್ಧರಾಗಿದ್ದ ತುಮಕೂರಿನ ಸಿದ್ದಗಂಗಾ ಮಠಾಧೀಶರು ಶಿವೈಕ್ಯರಾದ ಹಿನ್ನೆಲೆಯಲ್ಲಿ ಸಂತಾಪ ಸೂಚಕ ಸಭೆಗಳು ನಡೆಯುತ್ತಿವೆ.

ಸಿದ್ದಗಂಗಾ ಶ್ರೀಗಳು ಶಿವೈಕ್ಯವಾದ ಹಿನ್ನೆಲೆಯಲ್ಲಿ ಸಂತಾಪ ಸೂಚಿಸಿ ಶ್ರದ್ದಾಂಜಲಿಯನ್ನು ಸಮರ್ಪಣೆ ಮಾಡಲಾಯಿತು.
ಆನೇಕಲ್ ನ ಜನರು ಶಿವಕುಮಾರ ಸ್ವಾಮೀಜಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.

ಆನೇಕಲ್ ಪಟ್ಟಣದ ಬಸವೇಶ್ವರ ದೇವಾಲಯದ ಬಳಿ ಶ್ರೀಗಳ ಫೋಟೋ ಇಟ್ಟು ಸಂತಾಪ ಸೂಚನೆ ಸಭೆ ನಡೆಸಲಾಯಿತು.

ನಡೆದಾಡುವ ದೇವರು ಮತ್ತೊಮ್ಮೆ ಹುಟ್ಟಿ ಬರಲಿ ಎಂದು ಪ್ರಾರ್ಥಿಸಿದ್ದಾರೆ ಆನೇಕಲ್ ಜನತೆ. ಭಕ್ತರು ಹಾಗೂ ತುಮಕೂರು ಸಿದ್ದಗಂಗಾ ಮಠದ ಹಳೆ ವಿದ್ಯಾರ್ಥಿಗಳು ಇದ್ದರು.



ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ