ಸಿದ್ದಗಂಗಾ ಶ್ರೀಗಳಿಗೆ ಮಹಾವೀರ ಪ್ರಶಸ್ತಿ

ಸೋಮವಾರ, 17 ಏಪ್ರಿಲ್ 2017 (18:29 IST)
ಸಿದ್ದಗಂಗಾ ಮಠದಲ್ಲಿ ಶ್ರೀ ಶ್ರೀ ಶ್ರೀ ಡಾ.ಶಿವಕುಮಾರ್ ಸ್ವಾಮಿಜಿಯವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಹಾವೀರ ಪ್ರಶಸ್ತಿ ಪ್ರದಾನ ಮಾಡಿದರು. 
 
ರಾಜ್ಯ ಸರಕಾರ ನೀಡುವ ಉನ್ನತ ಪ್ರಶಸ್ತಿಯಾದ ಮಹಾವೀರ ಪ್ರಶಸ್ತಿಯನ್ನು ಸಿಎಂ ಸಿದ್ದರಾಮಯ್ಯ ಪೂಜ್ಯ ಶಿವಕುಮಾರ್ ಶ್ರೀಗಳಿಗೆ ನೀಡಿ ಗೌರವಿಸಿದರು.
 
ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಡಾ.ಶಿವಕುಮಾರ್ ಸ್ವಾಮಿಜಿಯವರಿಗೆ ಭಾರತ ರತ್ನ ಪ್ರಶಸ್ತಿ ನೀಡುವಂತೆ ಕೇಂದ್ರ ಸರಕಾರಕ್ಕೆ ಮನವಿ ಮಾಡಿದರು. ಭಾರತ ರತ್ನ ಪ್ರಶಸ್ತಿಗೆ ಶ್ರೀಗಳಿಗಿಂತ ಅರ್ಹ ವ್ಯಕ್ತಿ ಯಾರು ಇಲ್ಲ ಎಂದು ಹೇಳಿದರು.
 
ಶ್ರೀಗಳ ಆಶೀರ್ವಾದದಿಂದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಜಯಭೇರಿ ಬಾರಿಸಿದೆ. ಅವರ ಆಶೀರ್ವಾದ ಸದಾ ನಮ್ಮ ಮೇಲಿದೆ ಎಂದು ಸಿಎಂ ಸಿದ್ದರಾಮಯ್ಯ ಸಂತಸ ವ್ಯಕ್ತಪಡಿಸಿದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ